Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಾಕಿಸ್ತಾನ ಪರ ಘೋಷಣೆ ವಿಚಾರ : ಕಲಾಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ

---Advertisement---

 

 

ಬೆಂಗಳೂರು: ನಿನ್ನೆ ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದಾಗಿದೆ. ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಪಾಕಿಸ್ತಾನದ ಪರ ಘೋಷಣೆಯ ವಿಚಾರವೇ ಪ್ರತಿಧ್ವನಿಸಿದೆ.

ಕಲಾಪದಲ್ಲಿಯೇ ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿ, ತೀವ್ರ ಗದ್ದಲ ಶುರು ಮಾಡಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ‌ ನಡೆಸಿ, ಪಾರ್ಲಿಮೆಂಟಿನಲ್ಲಿ ಯಾರೂ ಕೂಡ ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ. ಇದು ಕರ್ನಾಟಕದ ಏಳು ಕೋಟಿ ಜನರ ಆತ್ಮ ಇರುವ ಜಾಗ. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ‌. ಯಾರೂ ರಕ್ಷಣೆ ಕೊಡಬೇಕಾಗುತ್ತೋ, ಅವರೇ ರೆಡ್ ಕಾರ್ಪೆಟ್ ಹಾಕಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ. ಇಲ್ಲಿ ಇನ್ನೆಷ್ಟು ಪಾಕಿಸ್ತಾನದವರು ಇದ್ದಾರೋ ಗೊತ್ತಿಲ್ಲ. ನಮಗೆ ಸಾಕಷ್ಟು ಭಯವಾಗುತ್ತಿದೆ. ಯೋಧರಿಗೆ ಹೇಗೆ ಉತ್ತರ ಕೊಡುವುದು ಎಂದು ಆರ್ ಅಶೋಕ್ ವಾಗ್ದಾಳು ನಡೆಸಿದ್ದಾರೆ.

ಇದೇ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನೀವೇ ಈ ರೀತಿಯಾದಂತಹ ಘಟನೆಗಳನ್ನು ಮಾಡಿಸಿರಬಹುದು ಎಂದರು. ಇದಕ್ಕೆ ಜಮೀರ್ ಕೂಡ ಉತ್ತರಿಸಿ, ಯಾರೇ ಘೋಷಣೆ ಕೂಗಿದರೂ ತಪ್ಪೆ. ದೇಶ ದ್ರೋಹಿಗಳೇ. ಈ ವಿಚಾರದಲ್ಲಿ ಎರಡು ಮಾತಿಲ್ಲ. ಬಿಜೆಪಿಯವರಿಗೆ ವಿಷಯಗಳೇ ಇಲ್ಲ. ಹಾಗಾಗಿ ಇದನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ವಿಚಾರವನ್ನು ಮಾತನಾಡುತ್ತಾರೆ‌. ನಿನ್ನೆ ವೇರೆ ಅವರಿಗೆ ಮುಖಭಂಗವಾಗಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment