Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನ ಪರ ಘೋಷಣೆ ವಿಚಾರ : ಕಲಾಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ

Facebook
Twitter
Telegram
WhatsApp

 

 

ಬೆಂಗಳೂರು: ನಿನ್ನೆ ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದಾಗಿದೆ. ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಪಾಕಿಸ್ತಾನದ ಪರ ಘೋಷಣೆಯ ವಿಚಾರವೇ ಪ್ರತಿಧ್ವನಿಸಿದೆ.

ಕಲಾಪದಲ್ಲಿಯೇ ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿ, ತೀವ್ರ ಗದ್ದಲ ಶುರು ಮಾಡಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ‌ ನಡೆಸಿ, ಪಾರ್ಲಿಮೆಂಟಿನಲ್ಲಿ ಯಾರೂ ಕೂಡ ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ. ಇದು ಕರ್ನಾಟಕದ ಏಳು ಕೋಟಿ ಜನರ ಆತ್ಮ ಇರುವ ಜಾಗ. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ‌. ಯಾರೂ ರಕ್ಷಣೆ ಕೊಡಬೇಕಾಗುತ್ತೋ, ಅವರೇ ರೆಡ್ ಕಾರ್ಪೆಟ್ ಹಾಕಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ. ಇಲ್ಲಿ ಇನ್ನೆಷ್ಟು ಪಾಕಿಸ್ತಾನದವರು ಇದ್ದಾರೋ ಗೊತ್ತಿಲ್ಲ. ನಮಗೆ ಸಾಕಷ್ಟು ಭಯವಾಗುತ್ತಿದೆ. ಯೋಧರಿಗೆ ಹೇಗೆ ಉತ್ತರ ಕೊಡುವುದು ಎಂದು ಆರ್ ಅಶೋಕ್ ವಾಗ್ದಾಳು ನಡೆಸಿದ್ದಾರೆ.

ಇದೇ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನೀವೇ ಈ ರೀತಿಯಾದಂತಹ ಘಟನೆಗಳನ್ನು ಮಾಡಿಸಿರಬಹುದು ಎಂದರು. ಇದಕ್ಕೆ ಜಮೀರ್ ಕೂಡ ಉತ್ತರಿಸಿ, ಯಾರೇ ಘೋಷಣೆ ಕೂಗಿದರೂ ತಪ್ಪೆ. ದೇಶ ದ್ರೋಹಿಗಳೇ. ಈ ವಿಚಾರದಲ್ಲಿ ಎರಡು ಮಾತಿಲ್ಲ. ಬಿಜೆಪಿಯವರಿಗೆ ವಿಷಯಗಳೇ ಇಲ್ಲ. ಹಾಗಾಗಿ ಇದನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ವಿಚಾರವನ್ನು ಮಾತನಾಡುತ್ತಾರೆ‌. ನಿನ್ನೆ ವೇರೆ ಅವರಿಗೆ ಮುಖಭಂಗವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!