ಚಿತ್ರದುರ್ಗ. ಆ.03: ನಗರದ ಶ್ರೀ ಚೆನ್ನಕೇಶವಸ್ವಾಮಿ ಬಡಾವಣೆ ಹಾಗೂ ಮಲ್ಲಯ್ಯ ಬಡಾವಣೆಯ ಮಧ್ಯಭಾಗದಲ್ಲಿರುವ ನಾಲ್ಕು ಕೂಡು ರಸ್ತೆಗಳ ಸ್ಥಳಕ್ಕೆ ‘ಕುವೆಂಪು ವೃತ್ತ’ ಎಂದು ನಾಮಕರಣ ಮಾಡಲು ನಗರಸಭೆ ನಿರ್ಧರಿಸಿದೆ.
ಚಿತ್ರ ಡಾನ್ ಬೋಸ್ಕೊ ಕಾಲೇಜು ಬಳಿ ಇರುವ ಕುವೆಂಪು ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಸಲ್ಲಿಸಿದ್ದ ಮನವಿ ಪುರಸ್ಕರಿಸಿ, ಜಿಲ್ಲಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಟಕ ಪೌರಸಭೆಗಳ ಅಧಿಕಾರಿಗಳು (ಮಾಗದರ್ಶಿ ನಕಲು ಮಂಜೂರಾತಿ ಮತ್ತು ಇತರೆ ನಿಯಮಗಳು) 1966ರ ನಿಯಮ 39ರ ಪ್ರಕಾರ, ಈ ನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರು ಅಥವಾ ಸಂಘ-ಸಂಸ್ಥೆಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆ ಹೊರಡಿಸಿದ 30 ದಿನಗಳ ಒಳಗಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕಾಗಿದೆ. ನಿಗದಿತ ಅವಧಿ ಮುಗಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










