Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾ ಗೌಡ ಮನೆ ತೆಗೆದುಕೊಳ್ಳಲು 2 ಕೋಟಿ ಕೊಟ್ಟಿರುವ ಮೃತ ನಿರ್ಮಾಪಕ ಸೌಂದರ್ಯ ಜಗದೀಶ್..!

Facebook
Twitter
Telegram
WhatsApp

 

ಬೆಂಗಳೂರು: ಅತ್ತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್.. ಇತ್ತ ರೇಣುಕಾಸ್ವಾಮಿ ಕೊಲೆ ಕೇಸ್. ಎರಡು ತನಿಖೆಯ ಹಂತದಲ್ಲಿಯೇ ಇದೆ. ಇದೀಗ ಸೌಂದರ್ಯ ಜಗದೀಶ್ ಹಾಗೂ ಪವಿತ್ರಾ ಗೌಡ ನಡುವೆ ಕೋಟಿ ಕೋಟಿ ವ್ಯವಹಾರವಾಗಿರುವುದು ತಿಳಿದು ಬಂದಿದೆ. ಪವಿತ್ರಾ ಗೌಡ ಮನೆ ತೆಗೆದುಕೊಳ್ಳುವುದಕ್ಕೆ ಸೌಂದರ್ಯ ಜಗದೀಶ್ ಎರಡು ಕೋಟಿ ಹಣ ನೀಡಿದ್ದಾರೆ. ಹಣ ಕೊಟ್ಟ ಮರುದಿನವೇ ಪವಿತ್ರಾ ಗೌಡ ರಾಜರಾಜೇಶ್ವರಿ ನಗರದಲ್ಲಿ ಮನೆ ಖರೀದಿ ಮಾಡಿದ್ದಾರೆ.

2017 ಹಾಗೂ 2018ರಲ್ಲಿ ಹಣದ ವ್ಯವಹಾರ ನಡೆದಿದೆ. ಮೊದಲ ಬಾರಿಗೆ 2017ರ ನವೆಂಬರ್ 13ರಂದು ಸೌಂದರ್ಯ ಜಗದೀಶ್ ಅಕೌಂಟಿನಿಂದ ಪವಿತ್ರಾ ಗೌಡಗೆ 1 ಕೋಟಿ ರೂಪಾಯಿ ಹಣ ರವಾನೆಯಾಗಿದೆ. ಬಳಿಕ 2018ರ ಜನವರಿ 23ರಂದು ಮತ್ತೆ ಒಂದು ಕೋಟಿ ಟ್ರಾನ್ಸ್ ಫರ್ ಆಗಿದೆ. ಜನವರಿ 24ರಂದು ಅಂದರೆ ಹಣ ರವಾನೆಯಾದ ಮಾರನೇ ದಿನವೇ ರಾಜರಾಜೇಶ್ವರಿ ನಗರದಲ್ಲಿ ಪವಿತ್ರಾ ಗೌಡ ಮನೆ ತೆಗೆದುಕೊಂಡಿದ್ದಾರೆ.

ಸೌಂದರ್ಯ ಜಗದೀಶ್ ಸಿನಿಮಾ ನಿರ್ಮಾಣದ ಜೊತೆಗೆ ಉದ್ಯಮಿಯು ಆಗಿದ್ದರು. ಬೆಂಗಳೂರಿನ ಯಶವಂತಪುರದಲ್ಲಿ ಜೆಟ್ ಲ್ಯಾಗ್ ಪಬ್ ಮಾಲೀಕರು ಕೂಡ ಆಗಿದ್ದರು. ಇತ್ತಿಚೆಗೆ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ್ದಾರೆ. ಸಾಲದ ಸುಳಿಗೆ ಸಿಲುಕಿ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತಿದೆ. ಪಾಲುದಾರರಿಂದ ಮೋಸವಾಗಿದೆ ಎಂದು ಸೌಂದರ್ಯ ಜಗದೀಶ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪವಿತ್ರಾ ಗೌಡಗೆ ಎರಡು ಕೋಟಿ ಹಣ ಕೊಟ್ಟಿರುವುದನ್ನು ಪಾಲುದಾರರಾದ ಸುರೇಶ್ ಪೊಲೀಸರಿಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಘಟನೆಗೆ ಸಮಾಜ ಮತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಶಕ್ತಿಯಿರಬೇಕು :  ಲೇಖಕ ಹೆಚ್.ಆನಂದ್‍ಕುಮಾರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಸಂಘಟನೆಗೆ ಸಮಾಜ ಮತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಶಕ್ತಿಯಿರಬೇಕೆಂದು ಲೇಖಕ ಹೆಚ್.ಆನಂದ್‍ಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್. 28 : ರಾಜ್ಯ ಕಾಂಗ್ರೆಸ್ ಸರ್ಕಾರ ಇತಿಹಾಸದಲ್ಲಿಯೇ ಕಂಡರಿಯಂದಂತ ಭ್ರಷ್ಠಾಚಾರದಲ್ಲಿ ತೊಡಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಂದ್ರಶೇಖರ್ ಸ್ವಾಮೀಜಿ ವರ್ಸಸ್ ಸಚಿವ ರಾಜಣ್ಣ : ತಾರಕ್ಕೇರಿದ ಮಾತುಗಳು..!

  ತುಮಕೂರು: ನಿನ್ನೆ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ಬಗ್ಗೆ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು

error: Content is protected !!