Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪವಿತ್ರಾ ಗೌಡ ಮನೆ ತೆಗೆದುಕೊಳ್ಳಲು 2 ಕೋಟಿ ಕೊಟ್ಟಿರುವ ಮೃತ ನಿರ್ಮಾಪಕ ಸೌಂದರ್ಯ ಜಗದೀಶ್..!

---Advertisement---

 

ಬೆಂಗಳೂರು: ಅತ್ತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್.. ಇತ್ತ ರೇಣುಕಾಸ್ವಾಮಿ ಕೊಲೆ ಕೇಸ್. ಎರಡು ತನಿಖೆಯ ಹಂತದಲ್ಲಿಯೇ ಇದೆ. ಇದೀಗ ಸೌಂದರ್ಯ ಜಗದೀಶ್ ಹಾಗೂ ಪವಿತ್ರಾ ಗೌಡ ನಡುವೆ ಕೋಟಿ ಕೋಟಿ ವ್ಯವಹಾರವಾಗಿರುವುದು ತಿಳಿದು ಬಂದಿದೆ. ಪವಿತ್ರಾ ಗೌಡ ಮನೆ ತೆಗೆದುಕೊಳ್ಳುವುದಕ್ಕೆ ಸೌಂದರ್ಯ ಜಗದೀಶ್ ಎರಡು ಕೋಟಿ ಹಣ ನೀಡಿದ್ದಾರೆ. ಹಣ ಕೊಟ್ಟ ಮರುದಿನವೇ ಪವಿತ್ರಾ ಗೌಡ ರಾಜರಾಜೇಶ್ವರಿ ನಗರದಲ್ಲಿ ಮನೆ ಖರೀದಿ ಮಾಡಿದ್ದಾರೆ.

2017 ಹಾಗೂ 2018ರಲ್ಲಿ ಹಣದ ವ್ಯವಹಾರ ನಡೆದಿದೆ. ಮೊದಲ ಬಾರಿಗೆ 2017ರ ನವೆಂಬರ್ 13ರಂದು ಸೌಂದರ್ಯ ಜಗದೀಶ್ ಅಕೌಂಟಿನಿಂದ ಪವಿತ್ರಾ ಗೌಡಗೆ 1 ಕೋಟಿ ರೂಪಾಯಿ ಹಣ ರವಾನೆಯಾಗಿದೆ. ಬಳಿಕ 2018ರ ಜನವರಿ 23ರಂದು ಮತ್ತೆ ಒಂದು ಕೋಟಿ ಟ್ರಾನ್ಸ್ ಫರ್ ಆಗಿದೆ. ಜನವರಿ 24ರಂದು ಅಂದರೆ ಹಣ ರವಾನೆಯಾದ ಮಾರನೇ ದಿನವೇ ರಾಜರಾಜೇಶ್ವರಿ ನಗರದಲ್ಲಿ ಪವಿತ್ರಾ ಗೌಡ ಮನೆ ತೆಗೆದುಕೊಂಡಿದ್ದಾರೆ.

ಸೌಂದರ್ಯ ಜಗದೀಶ್ ಸಿನಿಮಾ ನಿರ್ಮಾಣದ ಜೊತೆಗೆ ಉದ್ಯಮಿಯು ಆಗಿದ್ದರು. ಬೆಂಗಳೂರಿನ ಯಶವಂತಪುರದಲ್ಲಿ ಜೆಟ್ ಲ್ಯಾಗ್ ಪಬ್ ಮಾಲೀಕರು ಕೂಡ ಆಗಿದ್ದರು. ಇತ್ತಿಚೆಗೆ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ್ದಾರೆ. ಸಾಲದ ಸುಳಿಗೆ ಸಿಲುಕಿ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತಿದೆ. ಪಾಲುದಾರರಿಂದ ಮೋಸವಾಗಿದೆ ಎಂದು ಸೌಂದರ್ಯ ಜಗದೀಶ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪವಿತ್ರಾ ಗೌಡಗೆ ಎರಡು ಕೋಟಿ ಹಣ ಕೊಟ್ಟಿರುವುದನ್ನು ಪಾಲುದಾರರಾದ ಸುರೇಶ್ ಪೊಲೀಸರಿಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment