Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಕ್ತಿ ಯೋಜನೆಯ ಬಳಿಕ ದೇಗುಲದ ಆದಾಯದಲ್ಲಿ ಲಾಭ : ಎಷ್ಟು ಕೋಟಿ ಗೊತ್ತಾ..?

---Advertisement---

 

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಲವು ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಅದರಲ್ಲಿ ಮಹಿಳೆಯರಿಗೆ ಮುಖ್ಯವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ದತ್ತಿ ಯೋಜನೆಯಿಂದ ಸರ್ಕಾರದ ಖಜಾನೆ ದುಪ್ಪಟ್ಟಾಗಿದೆ

2022ರಲ್ಲಿ ದೇಗುಲಗಳಿಗೆ ಬಂದ ಆದಾಯ 230 ಕೋಟಿ. ಆದರೆ 2023ರಲ್ಲಿ ದೇಗುಲಗಳಿಗೆ ಬಂದ ಆದಾಯ 390 ಕೋಟಿ ಇದೆ.‌ ಈ ಮೂಲಕ 150 ಕೋಟಿ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ 150 ಕೋಟಿ ಹಣ ಹೆಚ್ಚಿನದಾಗಿ ಹರಿದು ಬಂದಿದೆ.

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷ 74 ಕೋಟಿ ಬಂದಿತ್ತು. ಆದರೆ ಈ ವರ್ಷ 123 ಕೋಟಿ ಬಂದಿದೆ. ಕೊಲ್ಲೂರು ಮೂಕಂಬಿಕಾ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ, ಈ ವರ್ಷದ ಆದಾಯ 59.47 ಕೋಟಿ ಬಂದಿದೆ.‌ ಚಾಮುಂಡೇಶ್ವರಿ ದೇಗುಲದಲ್ಲಿ ಕಳೆದ ವರ್ಷದ ಆದಾಯ 21.92ಕೋಟಿಯಾದರೆ, ಈ ವರ್ಷದ ಆದಾಯ 52.40 ಕೋಟಿ ಬಂದಿದೆ.

ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.74 ಕೋಟಿ, ಈ ವರ್ಷದ ಆದಾಯ 36.48 ಕೋಟಿಯಾಗಿದೆ. ಇನ್ನು ಕಟೀಲು ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 19.57 ಕೋಟಿಯಾದರೆ ಈ ವರ್ಷದ ಆದಾಯ 32.1೦ ಕೋಟಿಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 18.49ಕೋಟಿಯಾದರೆ ಈ ವರ್ಷದ ಆದಾಯ 26.71ಕೋಟಿಯಾಗಿದೆ. ಸವದತ್ತಿ ಯಲಮ್ಮನ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 10.99ಕೋಟಿಯಾಗಿದ್ದು, ಈ ವರ್ಷದ ಆದಾಯ 22.52 ಕೋಟಿಯಾಗಿದೆ. ಮಂದಾರ್ತಿ ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ ಈ ವರ್ಷದ ಆದಾಯ 59.47 ಕೋಟಿಯಾಗಿದೆ.

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 7.89ಕೋಟಿಯಾದರೆ ಈ ವರ್ಷದ ಆದಾಯ 12.25 ಕೋಟಿಯಾಗಿದೆ. ಬೆಂಗಳೂರು ಬನಶಂಕರಿ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 5.95 ಕೋಟಿ, ಈ ವರ್ಷದ ಆದಾಯ 10.58 ಕೋಟಿ ಬಂದಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ಮುಜರಾಯಿ ಇಲಾಖೆ ಶ್ರೀಮಂತವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...