Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಕ್ತಿ ಯೋಜನೆಯ ಬಳಿಕ ದೇಗುಲದ ಆದಾಯದಲ್ಲಿ ಲಾಭ : ಎಷ್ಟು ಕೋಟಿ ಗೊತ್ತಾ..?

---Advertisement---

 

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಲವು ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಅದರಲ್ಲಿ ಮಹಿಳೆಯರಿಗೆ ಮುಖ್ಯವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ದತ್ತಿ ಯೋಜನೆಯಿಂದ ಸರ್ಕಾರದ ಖಜಾನೆ ದುಪ್ಪಟ್ಟಾಗಿದೆ

2022ರಲ್ಲಿ ದೇಗುಲಗಳಿಗೆ ಬಂದ ಆದಾಯ 230 ಕೋಟಿ. ಆದರೆ 2023ರಲ್ಲಿ ದೇಗುಲಗಳಿಗೆ ಬಂದ ಆದಾಯ 390 ಕೋಟಿ ಇದೆ.‌ ಈ ಮೂಲಕ 150 ಕೋಟಿ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ 150 ಕೋಟಿ ಹಣ ಹೆಚ್ಚಿನದಾಗಿ ಹರಿದು ಬಂದಿದೆ.

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷ 74 ಕೋಟಿ ಬಂದಿತ್ತು. ಆದರೆ ಈ ವರ್ಷ 123 ಕೋಟಿ ಬಂದಿದೆ. ಕೊಲ್ಲೂರು ಮೂಕಂಬಿಕಾ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ, ಈ ವರ್ಷದ ಆದಾಯ 59.47 ಕೋಟಿ ಬಂದಿದೆ.‌ ಚಾಮುಂಡೇಶ್ವರಿ ದೇಗುಲದಲ್ಲಿ ಕಳೆದ ವರ್ಷದ ಆದಾಯ 21.92ಕೋಟಿಯಾದರೆ, ಈ ವರ್ಷದ ಆದಾಯ 52.40 ಕೋಟಿ ಬಂದಿದೆ.

ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.74 ಕೋಟಿ, ಈ ವರ್ಷದ ಆದಾಯ 36.48 ಕೋಟಿಯಾಗಿದೆ. ಇನ್ನು ಕಟೀಲು ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 19.57 ಕೋಟಿಯಾದರೆ ಈ ವರ್ಷದ ಆದಾಯ 32.1೦ ಕೋಟಿಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 18.49ಕೋಟಿಯಾದರೆ ಈ ವರ್ಷದ ಆದಾಯ 26.71ಕೋಟಿಯಾಗಿದೆ. ಸವದತ್ತಿ ಯಲಮ್ಮನ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 10.99ಕೋಟಿಯಾಗಿದ್ದು, ಈ ವರ್ಷದ ಆದಾಯ 22.52 ಕೋಟಿಯಾಗಿದೆ. ಮಂದಾರ್ತಿ ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ ಈ ವರ್ಷದ ಆದಾಯ 59.47 ಕೋಟಿಯಾಗಿದೆ.

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 7.89ಕೋಟಿಯಾದರೆ ಈ ವರ್ಷದ ಆದಾಯ 12.25 ಕೋಟಿಯಾಗಿದೆ. ಬೆಂಗಳೂರು ಬನಶಂಕರಿ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 5.95 ಕೋಟಿ, ಈ ವರ್ಷದ ಆದಾಯ 10.58 ಕೋಟಿ ಬಂದಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ಮುಜರಾಯಿ ಇಲಾಖೆ ಶ್ರೀಮಂತವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ: ಮೂವರು ನಾಪತ್ತೆಯಾದವರ ಗುರುತು ಪತ್ತೆ

ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನ: ಧೂಮಪಾನ ಮಾತ್ರವಲ್ಲ, ಈ ದೈನಂದಿನ ಅಭ್ಯಾಸಗಳೂ ಶ್ವಾಸಕೋಶದ ಆರೋಗ್ಯಕ್ಕೆ ಮಾರಕ!

ಆ..2ಕ್ಕೆ 3400 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿಗಳು ಹೀಗಿವೆ!

ಜಲಾಶಯದ ನೀರು ಇನ್ಮುಂದೆ ಕುಡಿಯಲು ಮಾತ್ರ ಕಾಯ್ದಿರಿಸಲು ಸರಕಾರದ ಆದೇಶ

ಪೇಟೆಂಟ್ ರಿಜಿಸ್ಟ್ರೇಷನ್, ಉತ್ಪನ್ನ ಅಭಿವೃದ್ಧಿ, ವಿನ್ಯಾಸ, ನವಾನ್ವೇಷಣೆ, ಸಂಶೋಧನೆಗೆ ಪ್ರೋತ್ಸಾಹ, ಪ್ರಾಯೋಗಿಕ ಬೋಧನಾ ಕೌಶಲ್ಯದ ಉನ್ನತೀಕರಣ ಹಾಗೂ ಪೋಷಕರ ಸೂಕ್ತ ಉತ್ತೇಜನದ ಮೂಲಕ ವಿದ್ಯಾರ್ಥಿಗಳ ಮಾನಸಿಕ ವಿಕಸನದೊಂದಿಗೆ ಜಾಗತಿಕ ಶೈಕ್ಷಣಿಕ ನಾಗಲೋಟಕ್ಕೆ ಹೊಂದಿಕೊಳ್ಳುವುದನ್ನು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಆದ್ಯತೆಯಾಗಿಸಿಕೊಳ್ಳಬೇಕು

BREAKING NEWS : ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಘೋಷಣೆ

Leave a Comment