Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಕ್ತಿ ಯೋಜನೆಯ ಬಳಿಕ ದೇಗುಲದ ಆದಾಯದಲ್ಲಿ ಲಾಭ : ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

 

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಲವು ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಅದರಲ್ಲಿ ಮಹಿಳೆಯರಿಗೆ ಮುಖ್ಯವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ದತ್ತಿ ಯೋಜನೆಯಿಂದ ಸರ್ಕಾರದ ಖಜಾನೆ ದುಪ್ಪಟ್ಟಾಗಿದೆ

2022ರಲ್ಲಿ ದೇಗುಲಗಳಿಗೆ ಬಂದ ಆದಾಯ 230 ಕೋಟಿ. ಆದರೆ 2023ರಲ್ಲಿ ದೇಗುಲಗಳಿಗೆ ಬಂದ ಆದಾಯ 390 ಕೋಟಿ ಇದೆ.‌ ಈ ಮೂಲಕ 150 ಕೋಟಿ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ 150 ಕೋಟಿ ಹಣ ಹೆಚ್ಚಿನದಾಗಿ ಹರಿದು ಬಂದಿದೆ.

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷ 74 ಕೋಟಿ ಬಂದಿತ್ತು. ಆದರೆ ಈ ವರ್ಷ 123 ಕೋಟಿ ಬಂದಿದೆ. ಕೊಲ್ಲೂರು ಮೂಕಂಬಿಕಾ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ, ಈ ವರ್ಷದ ಆದಾಯ 59.47 ಕೋಟಿ ಬಂದಿದೆ.‌ ಚಾಮುಂಡೇಶ್ವರಿ ದೇಗುಲದಲ್ಲಿ ಕಳೆದ ವರ್ಷದ ಆದಾಯ 21.92ಕೋಟಿಯಾದರೆ, ಈ ವರ್ಷದ ಆದಾಯ 52.40 ಕೋಟಿ ಬಂದಿದೆ.

ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.74 ಕೋಟಿ, ಈ ವರ್ಷದ ಆದಾಯ 36.48 ಕೋಟಿಯಾಗಿದೆ. ಇನ್ನು ಕಟೀಲು ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 19.57 ಕೋಟಿಯಾದರೆ ಈ ವರ್ಷದ ಆದಾಯ 32.1೦ ಕೋಟಿಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 18.49ಕೋಟಿಯಾದರೆ ಈ ವರ್ಷದ ಆದಾಯ 26.71ಕೋಟಿಯಾಗಿದೆ. ಸವದತ್ತಿ ಯಲಮ್ಮನ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 10.99ಕೋಟಿಯಾಗಿದ್ದು, ಈ ವರ್ಷದ ಆದಾಯ 22.52 ಕೋಟಿಯಾಗಿದೆ. ಮಂದಾರ್ತಿ ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ ಈ ವರ್ಷದ ಆದಾಯ 59.47 ಕೋಟಿಯಾಗಿದೆ.

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 7.89ಕೋಟಿಯಾದರೆ ಈ ವರ್ಷದ ಆದಾಯ 12.25 ಕೋಟಿಯಾಗಿದೆ. ಬೆಂಗಳೂರು ಬನಶಂಕರಿ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 5.95 ಕೋಟಿ, ಈ ವರ್ಷದ ಆದಾಯ 10.58 ಕೋಟಿ ಬಂದಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ಮುಜರಾಯಿ ಇಲಾಖೆ ಶ್ರೀಮಂತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!