ಶಕ್ತಿ ಯೋಜನೆಯ ಬಳಿಕ ದೇಗುಲದ ಆದಾಯದಲ್ಲಿ ಲಾಭ : ಎಷ್ಟು ಕೋಟಿ ಗೊತ್ತಾ..?

 

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಲವು ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಅದರಲ್ಲಿ ಮಹಿಳೆಯರಿಗೆ ಮುಖ್ಯವಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ದತ್ತಿ ಯೋಜನೆಯಿಂದ ಸರ್ಕಾರದ ಖಜಾನೆ ದುಪ್ಪಟ್ಟಾಗಿದೆ

2022ರಲ್ಲಿ ದೇಗುಲಗಳಿಗೆ ಬಂದ ಆದಾಯ 230 ಕೋಟಿ. ಆದರೆ 2023ರಲ್ಲಿ ದೇಗುಲಗಳಿಗೆ ಬಂದ ಆದಾಯ 390 ಕೋಟಿ ಇದೆ.‌ ಈ ಮೂಲಕ 150 ಕೋಟಿ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ 150 ಕೋಟಿ ಹಣ ಹೆಚ್ಚಿನದಾಗಿ ಹರಿದು ಬಂದಿದೆ.

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷ 74 ಕೋಟಿ ಬಂದಿತ್ತು. ಆದರೆ ಈ ವರ್ಷ 123 ಕೋಟಿ ಬಂದಿದೆ. ಕೊಲ್ಲೂರು ಮೂಕಂಬಿಕಾ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ, ಈ ವರ್ಷದ ಆದಾಯ 59.47 ಕೋಟಿ ಬಂದಿದೆ.‌ ಚಾಮುಂಡೇಶ್ವರಿ ದೇಗುಲದಲ್ಲಿ ಕಳೆದ ವರ್ಷದ ಆದಾಯ 21.92ಕೋಟಿಯಾದರೆ, ಈ ವರ್ಷದ ಆದಾಯ 52.40 ಕೋಟಿ ಬಂದಿದೆ.

ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 31.74 ಕೋಟಿ, ಈ ವರ್ಷದ ಆದಾಯ 36.48 ಕೋಟಿಯಾಗಿದೆ. ಇನ್ನು ಕಟೀಲು ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 19.57 ಕೋಟಿಯಾದರೆ ಈ ವರ್ಷದ ಆದಾಯ 32.1೦ ಕೋಟಿಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 18.49ಕೋಟಿಯಾದರೆ ಈ ವರ್ಷದ ಆದಾಯ 26.71ಕೋಟಿಯಾಗಿದೆ. ಸವದತ್ತಿ ಯಲಮ್ಮನ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 10.99ಕೋಟಿಯಾಗಿದ್ದು, ಈ ವರ್ಷದ ಆದಾಯ 22.52 ಕೋಟಿಯಾಗಿದೆ. ಮಂದಾರ್ತಿ ದುರ್ಗಾಪರಮೇಶ್ವರಿಯಲ್ಲಿ ಕಳೆದ ವರ್ಷದ ಆದಾಯ 31.36 ಕೋಟಿಯಾದರೆ ಈ ವರ್ಷದ ಆದಾಯ 59.47 ಕೋಟಿಯಾಗಿದೆ.

ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 7.89ಕೋಟಿಯಾದರೆ ಈ ವರ್ಷದ ಆದಾಯ 12.25 ಕೋಟಿಯಾಗಿದೆ. ಬೆಂಗಳೂರು ಬನಶಂಕರಿ ದೇವಸ್ಥಾನದಲ್ಲಿ ಕಳೆದ ವರ್ಷದ ಆದಾಯ 5.95 ಕೋಟಿ, ಈ ವರ್ಷದ ಆದಾಯ 10.58 ಕೋಟಿ ಬಂದಿದೆ. ಈ ಮೂಲಕ ಶಕ್ತಿ ಯೋಜನೆಯಿಂದ ಮುಜರಾಯಿ ಇಲಾಖೆ ಶ್ರೀಮಂತವಾಗಿದೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

56 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago