ಢಾಕಾ: ನೂಪೂರ್ ಶರ್ಮಾ ನೀಡಿದ್ದ ಪೈಗಂಬರ ಅವರ ಬಗೆಗಿನ ಅವಹೇಳನಕಾರಿ ಹೇಳಿಕೆಯಿಂದ ದೇಶದೆಲ್ಲೆಡೆ ಗಲಭೆ ಸೃಷ್ಟಿಯಾಗಿದೆ. ಮುಸ್ಲಿಂ ಮುಖಂಡರು ಪ್ರತಿಭಟನೆ ಮಾಡುತ್ತಿದ್ದು, ಹಲವು ಕಡೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಸಂಬಂಧ ಸಚಿವ ಹಸನ್ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದೇಶವನ್ನು ಸೆಳೆಯುವಂಥ ವಿಚಾರವೇ ಅಲ್ಲ ಎಂದಿದ್ದಾರೆ.
ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದ ವಿವಾದ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಹಸನ್ ಮಹಮೂದ್ ಹೇಳಿದ್ದಾರೆ.
ಆರೋಪಗಳನ್ನು ಅವರು ತಳ್ಳಿಹಾಕಿದ್ದು, ಅದು ಬಾಂಗ್ಲಾದೇಶದ ಗಮನ ಸೆಳೆಯುವಂಥ ವಿಷಯವೇ ಅಲ್ಲ ಎಂದಿದ್ದಾರೆ. ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಬಿಜೆಪಿಯನ್ನು ಅವರು ಅಭಿನಂದಿಸಿದ್ದಾರೆ. ಢಾಕಾದಲ್ಲಿ ಭಾರತೀಯ ಪತ್ರಕರ್ತರ ತಂಡವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಾದಕ್ಕೆ ಸಂಬಂಧಿಸಿ ಭಾರತದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಭಾರತ ಸರ್ಕಾರವು ಇನ್ನಷ್ಟು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…