Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೂಪೂರ್ ಶರ್ಮಾ ವಿರುದ್ಧ ರೊಚ್ಚಿಗೆದ್ದ ಜನರಿಂದ ರೈಲು ಧ್ವಂಸ, ಪ್ರಯಾಣಿಕರಿಗೆ ಗಾಯ..!

Facebook
Twitter
Telegram
WhatsApp

ಕೊಲ್ಕತ್ತಾ: ಮೊಹಮ್ಮದ್ ಪೈಗಂಬರ್ ಬಗ್ಗೆ ನೂಪೂರ್ ಶರ್ಮಾ ನೀಡಿದ ಅವಹೇಳನಕಾರಿ ಹೇಳಿಕೆಯಿಂದಾಗಿ ಮುಸ್ಲಿಂ ಸಮುದಾಯ ರೊಚ್ಚಿಗೆದ್ದಿದೆ. ದೇಶದ ಹಲವೆಡೆ ಪ್ರತಿಭಟನೆಯ ಕಾವು ಹೆಚ್ಚಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಗಲಭೆ ಸೃಷ್ಟಿಯಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ. ಪೊಲೀಸರು ಕೂಡ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ನಿರತರಾಗಿದ್ದಾರೆ. ಈ ಬೆನ್ನಲ್ಲೆ ರೈಲಿಗೆ ನುಗ್ಗಿ ಧ್ವಂಸ ಮಾಡಿರುವುದಲ್ಲದೆ, ಪ್ರಯಾಣಿಕರಿಗೂ ಗಾಯವಾಗುವಂತ ಘಟನೆ ನಡೆದಿದೆ.

ಬೆತುಗಾದಹರಿ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲ್ವೇ ಸ್ಟೇಷನ್ ಒಳಗೆ ನುಗ್ಗಿದ ಮುಸ್ಲಿಂರು ರೈಲಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಈ ವೇಳೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಹೊರಕಳುಹಿಸಿದ್ದಾರೆ. ಅಲ್ಲಿಂದ ಕಾಲ್ಕಿತ್ತವರು ಹೊರಗಡೆ ಇರುವ ಅಂಗಡಿಗಳ ಮೇಲೂ ದಾಳಿ ನಡೆಸಿ, ಕಲ್ಲು ತೂರಾಟ ಮಾಡಿದ್ದಾರೆ.

ಈಗಾಗಲೇ ನೂಪೂರ್ ಶರ್ಮಾರನ್ನು ಬಿಜೆಪಿ ತನ್ನ ಪಕ್ಷದಿಂದ ವಜಾಗೊಳಿಸಿದೆ. ಆದರೆ ನೂಪೂರ್ ಶರ್ಮಾರನ್ನು ಬಂಧಿಸಬೇಕು ಎಂದು ಮುಸ್ಲಿಂ ಸಂಘಟನೆಗಳು ಒಟ್ಟು ಹಿಡಿದಿವೆ. ಹೀಗಾಗಿ ದೇಶದ ಹಲವೆಡೆ ಪ್ರತಿಭಟನೆಯ ಕಾವು ಜೋರಾಗಿದೆ. ಇದರ ಮಧ್ಯೇ ನೂಪೂರ್ ಶರ್ಮಾ ಬೆಂಬಲಕ್ಕೆ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಿಂತಿದ್ದಾರೆ. ಈಗಾಗಲೇ ಕ್ಷಮೆ ಕೇಳಿದ್ದರು ಮಹಿಳೆಯೊಬ್ಬರ ಮೇಲೆ ಈ ರೀತಿ ಹೋರಾಟಗಳು ನಡೆಯುತ್ತಿದ್ದರು, ಜಾತ್ಯಾತೀತ ಉದಾರವಾದಿಗಳು ಮೌನವಾಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!