ಗೋಮಾಳ ಜಮೀನು ರಕ್ಷಿಸಿ : ಚಿಕ್ಕಬೆನ್ನೂರು ಗ್ರಾಮಸ್ಥರ ಮನವಿ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಿಕ್ಕಬೆನ್ನೂರು ಗ್ರಾಮದ ರಿ.ಸ.ನಂ. 69 ರ ಸರ್ಕಾರಿ ಗೋಮಾಳವನ್ನು ರಕ್ಷಿಸುವಂತೆ ಭರಮಸಾಗರ ಹೋಬಳಿ ಚಿಕ್ಕಬೆನ್ನೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಚಿಕ್ಕಬೆನ್ನೂರು ಗ್ರಾಮದ ಎಲ್ಲಾ ಜನಾಂಗದವರ ಹಸು, ಎಮ್ಮೆ, ಕುರಿ, ಮೇಕೆ ಇವುಗಳು ಮೇಯಲು ಜಾಗವಿಲ್ಲದ ಕಾರಣ 2012-13 ರಲ್ಲಿ ಅಂದಿನ ತಹಶೀಲ್ದಾರ್ ಕಾಂತರಾಜ್ ಗೋಮಾಳ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸಿ ಜಾನುವಾರುಗಳ ಮೇವಿಗೆ ಅವಕಾಶ ಮಾಡಿಕೊಟ್ಟಿದ್ದರು. ಕೆಲವು ಪ್ರಭಾವಿಗಳು ಈಗ ಗೋಮಾಳ ಜಮೀನಿನಲ್ಲಿ ಉಳುಮೆ ಮಾಡುವ ಹುನ್ನಾರ ನಡೆಸುತ್ತಿರುವುದರಿಂದ ಕಾನೂನು ರೀತಿ ಕ್ರಮ ಕೈಗೊಂಡು ಗೋಮಾಳಕ್ಕೆ ಸೇರಿದ 49 ಎಕರೆ ಹದಿನೆಂಟು ಗುಂಟೆ ಜಮೀನನ್ನು ರಕ್ಷಿಸುವಂತೆ ಚಿಕ್ಕಬೆನ್ನೂರು ಗ್ರಾಮಸ್ಥರು ಒತ್ತಾಯಿಸಿದರು.

ರೈತ ಮುಖಂಡರುಗಳಾದ ಬಸ್ತಿಹಳ್ಳಿ ಸುರೇಶ್‍ಬಾಬು, ಧನಂಜಯ ಹಂಪಯ್ಯನಮಾಳಿಗೆ, ನಿಂಗಪ್ಪ, ಕರಿಯಪ್ಪ, ಆರ್.ನಾಗರಾಜ್, ದೇವರಾಜ್, ಚನ್ನಬಸಪ್ಪ, ವಿ.ಕಲ್ಪನಾ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *