Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಸರವನ್ನು ರಕ್ಷಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ : ಡಾ ತೋಯಜಾಕ್ಷಿ ಬಾಯಿ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 : ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಹೆಚ್ಚಾಗಿದೆ. ಈ ರೋಗವನ್ನು ತಡೆಗಟ್ಟಲು 16 ರಿಂದ 46 ವಯಸ್ಸಿನ ಸ್ತ್ರೀ ಹಾಗೂ ಪುರುಷರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಡಾ. ತೋಯಜಾಕ್ಷಿ ಬಾಯಿ ಹೇಳಿದರು.

ನಗರದ ಧವಳಗಿರಿ ಬಡಾವಣೆಯಲ್ಲಿರುವ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ)ದಲ್ಲಿ ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್‌ (ರಿ) ಇವರ ಸಹಯೋಗದೊಂದಿಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದುವರೆದು ಮಾತನಾಡಿದ ಅವರು, ತಪಸ್ಮಾ ಶಿಬಿರದ ಮೂಲಕ ಬ್ರೆಸ್ಟ್ ಕ್ಯಾನ್ಸರ್ ಸರ್ವೆಕಲ್ ಕ್ಯಾನ್ಸರ್ ತಪಾಸಣೆ ಮಾಡಲಾಯಿತು. ಈ ಉಚಿತ ಶಿಬಿರದಲ್ಲಿ 120 ಸ್ತ್ರೀಯರಲ್ಲಿ ಡಯಾಬಿಟಿಕ್, 20 ಹನೇಮಿಯಾ 8 ಪರ್ಸೆಂಟ್ ಕಂಡುಬಂದಿದೆ. ಇದರ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೇವೆ.
ಸಾರ್ವಜನಿಕರು ಇತ್ತೀಚಿನ ದಿನಗಳಲ್ಲಿ ಗಿಡ ಮರಗಳನ್ನು ಕಡಿದು ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ನಗರಗಳಲ್ಲಿ ಮನೆಗೊಂದು ಗಿಡ ಬಳಸಿದರೆ ಆರೋಗ್ಯ ಚೆನ್ನಾಗಿರುತ್ತದೆ. ತಪಾಸಣಾ ಶಿಬಿರ ಆ ಯೋಜನೆ ಮಾಡಿದ್ದ ಎಲ್ಲರಿಗೂ ಹಾಗೂ ಸಹಕಾರ ನೀಡಿದ ಡಾ ಪ್ರಹ್ಲಾದ ಎನ್. ಬಿ. ಅವರಿಗೆ ಧನ್ಯವಾದಗಳು ತಿಳಿಸಿದರು.

ಈ ಸಂದರ್ಭದಲ್ಲಿ ಡಾ. ತೋಯಜಾಕ್ಷಿ ಬಾಯಿ ಹಾಗೂ ಡಾ. ಪ್ರಹ್ಲಾದ ಎನ್. ಬಿ. ಅವರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದ ಆಯೋಜಕರಾದ ಸದಸ್ಯರುಗಳಾದ ಜಿ.ಎಂ. ಲವಕುಮಾರ್, ಗುರುಮೂರ್ತಿ, ಶ್ರೀಕಾಂತ, ರಘು, ಶ್ರೀನಿವಾಸ್, ದೇವಾನಂದ ನಾಯಕ್, ಆಡಿಟರ್ ಗಂಗಣ್ಣ, ಶಶಿಕಿರಣ್, ಮುನಿಯಪ್ಪ, ಕೆಂಚವಿರಪ್ಪ, ಈಶ್ವರಪ್ಪ, ರಾಜಣ್ಣ, ಕಾಂತರಾಜ್, ಮುರುಗೇಶಣ್ಣ, ಪೊಲೀಸ ರಘು ಹಾಗೂ ಯೋಗ ಸಮಿತಿ ಹಾಗೂ ದೇವಾಲಯ ಸಮಿತಿಯ ಸದಸ್ಯರುಗಳು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...