Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಬಾಬು ನಾಯ್ಡು ಬೆಂಬಲಿಗರಿಂದ ಪ್ರತಿಭಟನೆ : ತಿರುಪತಿಯಲ್ಲಿ ಟೈರ್ ಗೆ ಬೆಂಕಿ

Facebook
Twitter
Telegram
WhatsApp

 

ವಿಜಯವಾಡ: ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರಣೆ ನಡೆಸಿದ ಹೈಕೋರ್ಟ್ ಬಂಧನಕ್ಕೆ ಅನುಮತಿ ನೀಡಿದ ಬೆನ್ನಲ್ಲೇ, ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಇದೀಗ ಚಂದ್ರಬಾಬು ನಾಯ್ಡು ಬೆಂಬಲಿಗರು ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಿರುಪತಿಯಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಚಂದ್ರಬಾಬು ಪುತ್ರ ಕೂಡ ಭಾಗಿಯಾಗಿದ್ದಾರೆ.

ನಾಯ್ಡು ಅವರ ಬಂಧನ ಮಾಡಲು ಹೋದಾಗಲೂ ಬೆಂಬಲಿಗರಿಂದ ಗಲಾಟೆ ಆಗಿತ್ತು. ಮಾತುನ ಚಕಮಕಿಯಾಗಿತ್ತು. ಇಂದು ಮುಂಜಾನೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಅದರ ಜೊತೆಗೆ ಕೆಲವು‌ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಸ್ಕಿಲ್ ಡೆವಲಪ್ಮೆಂಟ್ ನಲ್ಲಿ ಹಗರಣ ಆಗಿದೆ ಎಂಬುದು ಆರೋಪ ಬಂದ ಮೇಲೆ ಈ ಕೇಸನ್ನು ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಎ1 ಆರೋಪಿಯಾಗಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿರುವ ಪೊಲೀಸರು ಸದ್ಯ ಅವರನ್ನು ವಿಜಯವಾಡಕ್ಕೆ ಶಿಫ್ಟ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!