Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ನಾಳೆ ಚಿತ್ರದುರ್ಗದಲ್ಲಿ ಪ್ರತಿಭಟನೆ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂ.11 : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ ಬಡ ಕುಟುಂಬದ ವ್ಯಕ್ತಿಯನ್ನೇ ಕೊಂದಿದ್ದಾರೆ. ಒಬ್ಬ ಗರ್ಭಿಣಿ ಗಂಡನನ್ನ ಬಲಿ ತೆಗೆದುಕೊಂಡಿದ್ದಾರೆ. ವಯಸ್ಸಾದ ತಂದೆ ತಾಯಿಯನ್ನು ಸಾಕಬೇಕಾದ ಮಗನನ್ನ ಹತ್ಯೆ ಮಾಡಿದ್ದಾರೆ. ಆ ರೇಣುಕಾಸ್ವಾಮಿ ಅದ್ಯಾಕೆ ಮೆಸೇಜ್ ಮಾಡಿದನೋ..? ಇತ್ತ ಆ ಪವಿತ್ರಾ ಗೌಡಳಿಗೆ ಬ್ಲಾಕ್ ಮಾಡುವ ಆಪ್ಶನ್ ಇತ್ತು, ಪೊಲೀಸರಿಗೆ ದೂರು ನೀಡುವ ಅವಕಾಶವಿತ್ತು. ಆದರೆ ಈ ವಿಚಾರ ಹೋಗಿದ್ದೇ ಬೇರೆಡೆಗೆ, ತೆಗೆದುಕೊಂಡ ತಿರುವೇ ಬೇರೆ. ಒಟ್ನಲ್ಲಿ ಕಮೆಂಟ್ ವಿಚಾರ ಕೊಲೆಯಲ್ಲಿ ಅಂತ್ಯವಾಯ್ತು. ಈ ಕೊಲೆಯನ್ನು ಖಂಡಿಸಿ ನಾಳೆ ಚಿತ್ರದುರ್ಗದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ವಿವಿಧ ಸಂಘಟನೆಗಳು ಈ ಪ್ರತಿಭಟನೆಗೆ ಸಾಥ್ ನೀಡಿವೆ.

ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸಮುದಾಯ ಸೇರಿದಂತೆ ಹಲವು ಸಮುದಾಯಗಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿವೆ. ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದ್ದು, ಬಳಿಕ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ. ರೇಣುಕಾ ಸ್ವಾಮಿ ಮುಗ್ಧನಾಗಿದ್ದು ಆತನ ಕೊಲೆಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸುತ್ತಿವೆ. ಹೀಗಾಗಿ‌ ನಾಳೆ ಚಿತ್ರದುರ್ಗದಲ್ಲಿ  ಪ್ರತಿಭಟನೆ ನಡೆಸಲಿದ್ದಾರೆ.

ರೇಣುಕಾ ಸ್ವಾಮಿ ಅಪೋಲೋ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಮೃತ ಸ್ವಾಮಿ ದರ್ಶನ್ ಅವರ ಅಭಿಮಾನಿ ಅಂತ ಕೂಡ ಹೇಳಲಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಗಳನ್ನು ಮಾಡುತ್ತಿದ್ದ ಕಾರಣಕ್ಕೆ ಚಿತ್ರದುರ್ಗದಿಂದ ಆತನನ್ನು ಕರೆಸಿ, ಕಾಮಾಕ್ಷಿಪಾಳ್ಯದ ವಿನಯ್ ಗೆ ಸಂಬಂಧಿಸಿದ ಶೆಡ್ ನಲ್ಲಿ ಹೊಡೆದು, ಮೋರಿಯಲ್ಲಿ ಬಿಸಾಕಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!