Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋರಿ ಹಬ್ಬದ ಅನುಮತಿಗಾಗಿ 10 ಕಿ.ಮೀ ನಡೆದ ಸ್ವಾಮೀಜಿಗಳು..!

Facebook
Twitter
Telegram
WhatsApp

ಹಾವೇರಿ: ಕರಾವಳಿ ಭಾಗದಲ್ಲಿ ಹೋರಿ ಹಬ್ಬಕ್ಕೆ ಸಿಕ್ಕಾಪಟ್ಟೆ ಪ್ರಾಶಸ್ತ್ಯ ಇದೆ. ದೀಪಾವಳಿ ಹಬ್ಬ ಮುಗಿದ ಬಳಿಕ ಹೋರಿ ಹಬ್ಬ ಮಾಡುವ ಪದ್ಧತಿ ಇದೆ. ಆದ್ರೆ ಕೊರೊನಾ ಇರುವ ಕಾರಣ ಹೋರಿ ಹಬ್ಬವನ್ನ ನಿಷೇಧ ಮಾಡಲಾಗಿತ್ತು. ಇದೀಗ ಹೋರಿ ಹಬ್ಬದಲ್ಲಿ ನಡೆಯುವ ಹೋರಿ ಸ್ಪರ್ಧೆಗೆ ಅನುಮತಿ ನೀಡಿ ಅಂತ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದಾರೆ.

ಹೋರಿ ಹಬ್ಬದ ಸ್ಪರ್ಧೆ ನಿಷೇಧಿಸಿರುವುದು ರೈತ ಸಮುದಾಯಕ್ಕೂ ಬೇಸರ ತಂದಿದೆ. ಈ ಬಾರಿ ಕೊರೊನಾ ಕಡಿಮೆಯಾದ ಬೆನ್ನಲ್ಲೇ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲೂ ಹೋರಿ ಹಬ್ಬಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ನೀಡ್ತಾರೆ ಅನ್ನೋ ಭರವಸೆಯಲ್ಲಿ ರೈತ ಸಮುದಾಯವಿತ್ತು. ಆದ್ರೆ ಆ ಭರವಸೆ ಹುಸಿಯಾಗಿರೋದ್ರಿಂದ ಸ್ವಾಮೀಜಿಗಳು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಈ ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ಸಮಿತಿ ಹಾಗೂ ಮೂವರು ಸ್ವಾಮೀಜಿಗಳು ಭಾಗಿಯಾಗಿದ್ದರು. ಚಿಕ್ಕ ಆಲೂರಿನಿಂದ ಹಾವೇರಿ ನಗರದವರೆಗೆ ಸುಮಾರು 10 ಕಿ.ಮೀ ಪಾದಯಾತ್ರೆ ನಡೆಸಿದರು. ಹೋರಿ ಸ್ಪರ್ಧೆಗೆ ಅನುಮತಿ ನೀಡಿ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!