Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಗರಸಭೆ ವಿರುದ್ದ ವಿಜಯನಗರ ಬಡಾವಣೆ ನಿವಾಸಿಗಿಳಂದ ಪ್ರತಿಭಟನೆ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಡಿ.16): ವಿಜಯನಗರ ಬಡಾವಣೆ ಕೊಳಚೆ ಪ್ರದೇಶದಲ್ಲಿ ಸುಮಾರು ನಲವತ್ತು ವರ್ಷಗಳಿಂದಲೂ ವಾಸಿಸುತ್ತಿರುವವರನ್ನು ಏಕಾಏಕಿ ತೆರೆವುಗೊಳಿಸಲು ನಗರಸಭೆ ಕೈಗೊಂಡಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ದ ಧಿಕ್ಕಾರಗಳನ್ನು ಕೂಗಿ ಯಾವುದೇ ಕಾರಣಕ್ಕೂ ಕೊಳಗೇರಿಗಳನ್ನು ತೆರವುಗೊಳಿಸಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ನಗರಸಭೆ ವಾರ್ಡ್ ನಂ-19 ರ ವ್ಯಾಪ್ತಿಯಲ್ಲಿ ಬರುವ ವಿಜಯನಗರ ಬಡಾವಣೆಯನ್ನು ಕೊಳಗೇರಿ ಪ್ರದೇಶವೆಂದು 2012 ರಲ್ಲಿಯೇ ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. 168 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರೆ ಜಾಸ್ತಿಯಿದ್ದಾರೆ. ಎಲ್ಲರೂ ನಿತ್ಯವೂ ಕೂಲಿ ಮಾಡಿಕೊಂಡು ಜೀವಿಸುವವರಾಗಿರುವುದರಿಂದ ಯಾವುದೇ ಕಾರಣಕ್ಕೂ ಇವರುಗಳನ್ನು ನಗರಸಭೆಯವರು ತೆರವುಗೊಳಿಸಬಾರದು. ನಾಗರೀಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದಲೇ ಕೊಳಗೇರಿ ಎಂದು ಘೋಷಿಸಿದ್ದು, ಇಲ್ಲಿಯವರೆಗೂ ವಿಜಯನಗರ ಬಡಾವಣೆ ನಿವಾಸಿಗಳು ಮೂಲಭೂತ ಸೌಲಭ್ಯಗಳಿಲ್ಲದೆ ವಾಸಿಸುತ್ತಿದ್ದಾರೆಂದರು.

ನಗರಸಭೆಯವರು ಪದೇ ಪದೇ ವಿಜಯನಗರ ಬಡಾವಣೆಯ ಕೊಳಗೇರಿಗಳನ್ನು ತೆರವುಗೊಳಿಸುವಂತೆ ಬಲವಂತ ಮಾಡುತ್ತಿರುವುದರಿಂದ ಕೊಳಚೆ ನಿವಾಸಿಗಳು ಮಾನಸಿಕವಾಗಿ ನೊಂದಿದ್ದಾರೆ. ಹಾಗಾಗಿ ನಗರಸಭೆ ಕೈಗೊಂಡಿರುವ ತೀರ್ಮಾನವನ್ನು ರದ್ದುಪಡಿಸಿ ಅಲ್ಲಿನ ಕೊಳಗೇರಿಗಳಿಗೆ ಮೂಲಸೌಲಭ್ಯಗಳನ್ನು ಒದಗಿಸುವಂತೆ ಬಿ.ಕೆ.ರಹಮತ್‍ವುಲ್ಲಾ ಜಿಲ್ಲಾಡಳಿತವನ್ನು ಆಗ್ರಹಿಸಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಮಾತನಾಡಿ ವಿಜಯನಗರ ಬಡಾವಣೆಯನ್ನು ಕೊಳಗೇರಿ ಎಂದು ಘೋಷಿಸಿದ ಮೇಲೆ ನಾಗರೀಕ ಸೌಲಭ್ಯಗಳಾದ ನಿವೇಶನ, ಮನೆ, ಹಕ್ಕುಪತ್ರ, ರಸ್ತೆ, ಚರಂಡಿ, ಬೀದಿ ದೀಪ, ಶೌಚಾಲಯ ಇವುಗಳನ್ನೆಲ್ಲಾ ಕಲ್ಪಿಸುವುದು ನಗರಸಭೆ, ಜಿಲ್ಲಾಡಳಿತ, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಜವಾಬ್ದಾರಿಯಾಗಿರುತ್ತದೆ. ಇದಕ್ಕೆ ಬದಲಾಗಿ ಯಾರೋ ಮೂರನೆಯವರು ಇಲ್ಲಿ ಓಡಾಡಲು ತೊಂದರೆಯಾಗುತ್ತದೆಂಬ ಒಂದೇ ಕಾರಣಕ್ಕೆ ಇಲ್ಲಿನ ಕೊಳಗೇರಿಗಳನ್ನು ತೆರುವುಗೊಳಿಸಲು ನಗರಸಭೆ ಮುಂದಾಗಿರುವುದು ಜಿಲ್ಲಾಡಳಿತದ ತೀರ್ಮಾನಕ್ಕೆ ವಿರುದ್ದವಾಗಿದೆ. ಒಂದು ವೇಳೆ ಕೊಳಚೆ ಪ್ರದೇಶವನ್ನು ತೆರವುಗೊಳಿಸಿದರೆ ಬಡವರು ಬೀದಿಪಾಲಾಗಬೇಕಾಗುತ್ತದೆ ಎಂದು ಸಮಸ್ಯೆಗಳನ್ನು ತೋಡಿಕೊಂಡರು.

ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಉಪಾಧ್ಯಕ್ಷ ಇಮಾಂಸಾಬ್, ಕಾರ್ಯದರ್ಶಿ ಎನ್.ರಂಗಸ್ವಾಮಿ, ರಜೀಯ, ಮಾರಕ್ಕ, ಫಾಮಿದ, ಕಮಲಮ್ಮ, ರಾಜಣ್ಣ, ನಸ್ರುಲ್ಲಾ ಸೇರಿದಂತೆ ವಿಜಯನಗರ ಕೊಳಗೇರಿ ಪ್ರದೇಶದ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!