Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಸಚಿವ ಡಿ.ಸುಧಾಕರ್

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 26 :ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸಚಿವ ಡಿ.ಸುಧಾಕರ್ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ  ಭಾಗವಹಿಸಿ ಅವರು ಮಾತನಾಡಿದರು.

ಎಲ್ಲ ಕಡೆಯಿಂದಲೂ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಡಿಕೆ ಇದೆ. ಹಾಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲಿದ್ದು, ಕಾರ್ಯಾರಂಭ ಮಾಡಬೇಕು. ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹಾಗೂ ತಾ.ಪಂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಣ್ಣಪುಟ್ಟ ದುರಸ್ಥಿಯಿದ್ದಲ್ಲಿ ಪಂಚಾಯಿತಿ ಮಟ್ಟದಲ್ಲಿಯೇ ಆರ್.ಓ. ಘಟಕ ರಿಪೇರಿ ಮಾಡಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ಆರ್.ಓ.ಘಟಕಗಳ ನಿರ್ವಹಣೆಗೆ ಒಂದೇ ಏಜೆನ್ಸಿ ನಿರ್ವಹಣೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಸಭೆಗೆ ಮಾಹಿತಿ ನೀಡಿದರು. ವಿದ್ಯುತ್ ಬಿಲ್ ಪಾವತಿಸಿರುವ, ಸುಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಂಬಂಧಪಟ್ಟ ಏಜೆನ್ಸಿಯವರು ಗ್ರಾಮ ಪಂಚಾಯಿತಿಯವರಿಗೆ ಹಸ್ತಾಂತರ ಮಾಡಿದರೆ ಇಂತಹ ಆರ್.ಓ. ಘಟಕಗಳನ್ನು ಪಂಚಾಯಿತಿ ವತಿಯಿಂದಲೇ ನಿರ್ವಹಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment