ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 18 : ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22 ರಿಂದ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯನ್ನು ಪ್ರಾರಂಭಿಸಲಿದೆ. ಇದರಲ್ಲಿ ಧರ್ಮದ ಕಲಂನಲ್ಲಿ ಇಸ್ಲಾಂ, ಕ್ರೈಸ್ತ, ಜೈನ್, ಭೌದ್ದ, ಸಿಖ್ ಮತ್ತು ಪಾರ್ಸಿ ಎಂದು, ಮತ್ತು ಜಾತಿಯ ಕಲಂನಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಭೌದ್ದ, ಸಿಖ್ ಮತ್ತು ಪಾರ್ಸಿ ಎಂದು ನಮೂದಿಸಿ ಯಾವುದೇ ತಪ್ಪುಗಳಿಲ್ಲದೇ ವಿವರಗಳನ್ನು ಒದಗಿಸುವಂತೆ ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಸೈಯದ್ ಖುದ್ದುಸ್ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಸೈಯದ್ ಖುದ್ದುಸ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರ ಧರ್ಮ ಮತ್ತು ಮತ್ತು ಬಾಂಧವರಲ್ಲಿ ಮನವಿ ಮಾಡಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಕನಸಿನ ಕೂಸಾಗಿರುವ ಶೈಕ್ಷಣಿಕ ಮತ್ತು ಜಾತಿಗಣತಿಯಿಂದ ಸಾಮಾಜಿಕ ನ್ಯಾಯ, ಜಾತಿ ತಾರತಮ್ಯವನ್ನು ನಿವಾರಿಸಿ, ಸಾಮಾಜಿಕ ನ್ಯಾಯವನ್ನು ಸ್ಥಾಪಿಸುವುದು, ಸಮೀಕ್ಷೆಯ ಪ್ರಾಥಮಿಕ ಉದ್ದೇಶವಾಗಿದ್ದು, ಜಾತಿಗಳ ಜನ ಸಂಖ್ಯೆಯ ಆಧಾರದ ಮೇಲೆ ಸೂಕ್ತ ಮೀಸಲಾತಿ ನೀತಿಗಳನ್ನು ರೂಪಿಸಲು ಮತ್ತು ಅಸ್ತಿತ್ವದಲ್ಲಿರುವ ನೀತಿಗಳನ್ನು ಪರಿಷ್ಕರಿಸಲು ಸಮೀಕ್ಷೆ ಸಹಾಯ ಮಾಡುತ್ತದೆ, ಹಿಂದುಳಿದ ವರ್ಗಗಳಿಗಾಗಿ ಶಿಕ್ಷಣ, ಉದ್ಯೋಗ ಮತ್ತು ಇತರೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಅಂಕಿ ಅಂಶಗಳು ಪ್ರಮುಖವಾಗುತ್ತವೆ, ಕಾಂಗ್ರೆಸ್ ಸರ್ಕಾರವು ಸಾಮಾಜಿಕ ನ್ಯಾಯ ಮತು ್ತ ಅಭಿವೃದ್ಧಿಗೆ ಮುಂದಾಗಿದೆ ಎಂದರು.
ಈ ನಿಟ್ಟಿನಲ್ಲಿ ಸರ್ಕಾರವು ವಿವಿಧ ವರ್ಗಗಳಿಗೆ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಈ ಜನಗಣತಿಗಳು ಮುಖ್ಯವಾದ ದಾಖಲೆಗಳಾಗಲಿವೆಯೆಂಬುದನ್ನು ನೆನಪಿನಲ್ಲಿಟ್ಟುಕೊಂಡು, ಆಧಾರ್ ಕಾರ್ಡ್ ನವೀಕರಿಸದಿದ್ದರೆ, ಡಿಜಿಟಲ್ ಸಹಿ ಅಥವಾ ಬಯೋಮೆಟ್ರಿಕ್ ಮಾಡದಿದ್ದರೆ ಅದನ್ನು ತಕ್ಷಣ ನವೀಕರಿಸಬೇಕು. ಸರ್ಕಾರವು, ಎಲ್ಲೆಡೆ ನವೀಕರಿಸಿದ ಆಧಾರ್ ವಿವರಗಳನ್ನು ಸ್ವೀಕರಿಸುತ್ತದೆ, ವಿವರಗಳನ್ನು ಒದಗಿಸುವಾಗ ಧರ್ಮದ ಕಲಂನಲ್ಲಿ ಇಸ್ಲಾಂ, ಕ್ರೈಸ್ತ, ಜೈನ್, ಭೌದ್ದ, ಸಿಖ್ ಮತ್ತು ಪಾರ್ಸಿ ಎಂದು, ಮತ್ತು ಜಾತಿಯ ಕಲಂನಲ್ಲಿ ಮುಸ್ಲೀಂ, ಕ್ರಿಶ್ಚಿಯನ್, ಜೈನ, ಭೌದ್ದ, ಸಿಖ್ ಮತ್ತು ಪಾರ್ಸಿ ಎಂದು ನಮೂದಿಸಿ ಯಾವುದೇ ತಪ್ಪುಗಳಿಲ್ಲದೇ ವಿವರಗಳನ್ನು ಒದಗಿಸಬೇಕು ಎಂದಿದ್ದಾರೆ.
ಈ ಜನಗಣತಿಯು ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಬಹಳ ಮುಖ್ಯವಾಗಲಿದೆ. ಎಲ್ಲಾ ಅಲ್ಪಸಂಖ್ಯಾತರು ಯಾವುದೇ ನಿರ್ಲಕ್ಷ್ಯವಿಲ್ಲದೆ, ಈ ಜಾತಿಗಣತಿ ಬಗ್ಗೆ ಗಮನ ಹರಿಸಬೇಕು ಮತ್ತು ಮಸೀದಿಗಳಲ್ಲಿ, ಚರ್ಚ್ಗಳಲ್ಲಿ, ಜೈನ ಮಂದಿರಗಳಲ್ಲಿ, ಗುರುದ್ವಾರಗಳಲ್ಲಿ, ಭೌದ್ದ ಮಂದಿರಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ. ಜನಗಣತಿಯ ಸಮಯದಲ್ಲಿ ಮತ್ತು ಸಾಮಾನ್ಯ ದಿನಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮುಂದುವರಿಸಬೇಕು, ಇದರಿಂದ ನಮ್ಮ ಸಮಾಜವು ಅದನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಬಹುದಾಗಿದೆ, ಈ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಸೈಯದ್ ಖುದ್ದುಸ್ ಮನವಿ ಮಾಡಿದರು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್