Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಳಿತಕ್ಕೆ ಒಳಗಾಗಿರುವ ವಿಶ್ವಕರ್ಮ ಸಮಾಜಕ್ಕೆ ನ್ಯಾಯ ಕಲ್ಪಿಸಿ : ಸಿ. ನಾರಾಯಣಾಚಾರ್

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 17 : ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.

ವಿಶ್ವಕರ್ಮ ಸಮಾಜದ ಮಾಜಿ ತಾಲ್ಲೂಕು ಅಧ್ಯಕ್ಷ ಸಿ. ನಾರಾಯಣಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿ ವಿಶ್ವಕರ್ಮ ಸಮಾಜ ದೇಶಕ್ಕೆ ಪಂಚ ಕಸಬುಗಳ ಮೂಲಕ ವಿಶೇಷವಾದ ಕೊಡುಗೆಯನ್ನು ನೀಡಿದೆ. ದೇಶದಲ್ಲಿ ಸುಮಾರು ಏಳು ಕೋಟಿಗೂ ಹೆಚ್ಚು ವಿಶ್ವಕರ್ಮ ಜನಸಂಖ್ಯೆಯಿದ್ದು, ಈ ಸಮುದಾಯವು ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಅನ್ಯಾಯಕ್ಕೆ ಒಳಪಟ್ಟಿದೆ ಎಂದರು.

ತಹಶೀಲ್ದಾರ್ ಎಂ ಸಿದ್ದೇಶ್ ಮಾತನಾಡಿ ನಾಡಿನ ಇತಿಹಾಸವನ್ನು ಕಟ್ಟಿ ಕೊಡುವಲ್ಲಿ ಪ್ರಾಚೀನ ಸ್ಮಾರಕಗಳು ಮತ್ತು ದೇವಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಸ್ಮಾರಕ ಮತ್ತು ದೇವಾಲಯಗಳನ್ನು ನಿರ್ಮಿಸಿರುವ ನಮ್ಮ ಪೂರ್ವಿಕರ ಶ್ರಮ ಮತ್ತು ಸೃಜನಾತ್ಮಕ ಕಲೆ ಇಂದಿನ ಯುವ ಪೀಳಿಗೆಗೆ ಮಾದರಿ. ಶಿಲ್ಪಕಲೆಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ರಾಜ್ಯ ಸರ್ಕಾರವು ವಿಶ್ವಕರ್ಮರ ಕೊಡುಗೆಯನ್ನು ಪರಿಗಣಿಸಿ 2016ರಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯನ್ನು ಜಾರಿಗೆ ತಂದಿತು. ಇಂದಿನ ಆಧುನಿಕ ಎಂಜಿನಿಯರುಗಳು ಅಸಾಧ್ಯವೆನ್ನುವ ಅನೇಕ ರೀತಿಯ ಕಲೆಯನ್ನು ಬಹಳ ಹಿಂದೆಯೇ ನಮ್ಮ ವಿಶ್ವಕರ್ಮರು ವಿಶ್ವಕ್ಕೆ ಪರಿಚಿಯಿಸಿದರು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಆರ್ ಬಾಲಕೃಷ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಸತ್ಯನಾರಾಯಣಚಾರ್, ಪ್ರಭಾಕರ್ ಚಾರ್, ಗುರುಮೂರ್ತಿ ಚಾರ್, ಮಂಜುನಾಥ ಚಾರ್, ಮಲ್ಲೇಶ್ ಚಾರ್, ಗೋಪಾಲಚಾರ್, ರಾಘವೇಂದ್ರ, ಶಶಿಧರ್, ಸುರೇಶ್, ಈಶ್ವರಪ್ಪ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now