Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು – ಯಲ್ಲದಕೆರೆ ಮಾರ್ಗದಲ್ಲಿ KSRTC ಬಸ್ ವ್ಯವಸ್ಥೆ ಕಲ್ಪಿಸಿ : ವಿದ್ಯಾರ್ಥಿಗಳ ಮನವಿ

---Advertisement---

 

ಸುದ್ದಿಒನ್, ಹಿರಿಯೂರು, ಆಗಸ್ಟ್.06  : ತಾಲೂಕಿನ ಯಲ್ಲದಕೆರೆ ಭಾಗದ ನೂರಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಕೆಎಸ್ಆರ್ಟಿಸಿ ಬಸ್ ಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್ ವ್ಯಾಸಂಗಕ್ಕಾಗಿ ಹಿರಿಯೂರು ಹಾಗೂ ಚಿತ್ರದುರ್ಗಕ್ಕೆ ಹೋಗಲು ಬಸ್ ಗಳಿಲ್ಲ.  ವಿದ್ಯಾರ್ಥಿಗಳು ಬೆಳಿಗ್ಗೆ 6  ಗಂಟೆಯಿಂದ 10 ಗಂಟೆವರೆಗೂ ಕಾದು ಕುಳಿತರು ಕೆಎಸ್ಆರ್ಟಿಸಿ ಅಥವಾ ಖಾಸಗಿ ಬಸ್ ವ್ಯವಸ್ಥೆ ಇಲ್ಲ.

ಬಸ್ ಇಲ್ಲದ ಕಾರಣ ದುಬಾರಿ ವೆಚ್ಚ ಕೊಟ್ಟು  ಆಟೋಗಳಲ್ಲಿ ಹೋಗಬೇಕು. ಒಂದು ವೇಳೆ ಆಟೋ ಇಲ್ಲವಾದಲ್ಲಿ ಹುಳಿಯಾರು ಕಡೆಯಿಂದ ಬರುವ ಲಾರಿಗಳು  ಇಲ್ಲವೆ ಅಥವಾ ಸಿಕ್ಕಸಿಕ್ಕ ವಾಹನಗಳಿಗೆ ಕೈ ಅಡ್ಡ ಹಾಕಿ ಹತ್ತಿಕೊಂಡು ಪ್ರಯಾಣ ಮಾಡಬೇಕಾಗುತ್ತದೆ. ಆದರೆ ಯಲ್ಲದಕೆರೆ ಭಾಗದಲ್ಲಿ ವಿದ್ಯಾರ್ಥಿನಿಯರು ಹೆಚ್ಚು  ಇದ್ದಾರೆ ಅವರಿಗೆ ಇದು ಅತ್ಯಂತ ಕಠಿಣ ಪರಿಸ್ಥಿತಿ ಆಗಿದೆ.

ಬೆಳಿಗ್ಗೆ 9.15ಕ್ಕೆ ಬರಬೇಕಾದ ಯಡಿಯೂರು ನಿಂದ ಗದಗ ಕಡೆ ಹೊರಡುವ ಬಸ್ 9.35ನಿಮಿಷಕ್ಕೆ ಬರುತ್ತದೆ. ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ತೀವ್ರ ಸಮಸ್ಯೆ ಉಂಟಾಗಿದೆ. ಇಲ್ಲದೆ ಹಿರಿಯೂರು ನಗರದಿಂದ ಸಂಜೆ ಯಲ್ಲದಕೆರೆ ಕಡೆಗೂ ಸಹ ಯಾವುದೇ ಬಸ್ ಇಲ್ಲ. ಮಧ್ಯಾಹ್ನ 2.30ಕ್ಕೆ ಬಾಗಲಕೊಟೆ ಮೈಸೂರು ಹೊರಡುತ್ತದೆ.

ಇದಾದ ನಂತರ ಸಂಜೆ 6.30ರ ವರೆಗೆ ಯಾವುದೇ ಬಸ್ ಯಲ್ಲದಕೆರೆ ಮಾರ್ಗಕ್ಕೆ ಇರುವುದಿಲ್ಲ. 4ಗಂಟೆಗೆ ಸಿಂಧನೂರು ಬಸ್ ಮತ್ತು 4.30ಕ್ಕೆ ತುರುವೇಕೆರೆ ಮೈಸೂರು ಬಸ್ ಬರುತ್ತಿತ್ತು. ಇದೀಗ ಈ ಎರಡು ಬಸ್ ನಿಲ್ಲಿಸಲಾಗಿದೆ. ಶಾಲಾ ಕಾಲೇಜು ಮುಗಿಸಿ ಸಂಜೆಯವರೆಗೂ ನಾವು ನಗರದಲ್ಲಿ ಕಾಲ ಕಳೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹಾಗೂ ಅಧಿಕಾರಿಗಳು ಈ ಭಾಗದ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ ಸಾರಿಗೆ ಬಸ್ ಕಲ್ಪಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್, ಸಂತೋಷ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment