Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೂಲಿಬೆಲೆ ಪ್ರಚೋದನಕಾರಿ ಭಾಷಣ :  ಪರಿಶೀಲನೆ ಮಾಡುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್

Facebook
Twitter
Telegram
WhatsApp

ಬೆಳಗಾವಿ: ಪರಿಷತ್ ಕಲಾಪದಲ್ಲಿ ಇಂದು ಚಕ್ರವರ್ತಿ ಸೂಲಿಬೆಲೆ ವಿಚಾರ ಚರ್ಚೆಗೆ ಬಂದಿದೆ. ಬಿಜೆಪಿ ಸದಸ್ಯ ತುಳಸಿ ಮುನಿರಾಜು ಗೌಡ, ಮಾತಿಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿ ಉತ್ತರಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆಯಂತ ಯುವಕರ ಕಣ್ಮಣಿ ಮೇಲೆ ಗೂಂಡಾ ಕಾಯ್ದೆ ದಾಖಲು ಮಾಡಿದ್ದಾರೆ ತುಳಸಿ ಮುನಿರಾಜು ಗೌಡ ಪ್ರಶ್ನೆ ಕೇಳಿದ್ದರು. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ ಎಂದು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ಚಕ್ರವರ್ತಿ ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣದಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎನ್ನುವುದಾದರೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ. ಶಿವಮೊಗ್ಗ ಕೋಮುಗಲಭೆಯನ್ನು ಅದೊಂದು ಸಣ್ಣ ಘಟನೆ ಅಂತ ಸಚಿವರು ಹೇಳಿದ್ದರು.

ಚಕ್ರವರ್ತಿ ಸೂಲಿಬೆಲೆ ಮೇಲೆ ಕಮ್ಯುನಲ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು ಅಂತ ನೀವು ಹೇಳ್ತಾ ಇದ್ದೀರಾ? ನಾವು ಇನ್ನೂ ಕಮ್ಯುನಲ್ ಕೇಸ್ ಹಾಕಿಲ್ಲ. ನೀವು ಹೇಳಿದರೆ ಕಮ್ಯುನಲ್ ಆಕ್ಟ್ ಅಡಿ ಕೇಸ್ ಹಾಕ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!