Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೂಲಿಬೆಲೆ ಪ್ರಚೋದನಕಾರಿ ಭಾಷಣ :  ಪರಿಶೀಲನೆ ಮಾಡುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್

ಸಚಿವ ಪರಮೇಶ್ವರ್
---Advertisement---

ಬೆಳಗಾವಿ: ಪರಿಷತ್ ಕಲಾಪದಲ್ಲಿ ಇಂದು ಚಕ್ರವರ್ತಿ ಸೂಲಿಬೆಲೆ ವಿಚಾರ ಚರ್ಚೆಗೆ ಬಂದಿದೆ. ಬಿಜೆಪಿ ಸದಸ್ಯ ತುಳಸಿ ಮುನಿರಾಜು ಗೌಡ, ಮಾತಿಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿ ಉತ್ತರಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆಯಂತ ಯುವಕರ ಕಣ್ಮಣಿ ಮೇಲೆ ಗೂಂಡಾ ಕಾಯ್ದೆ ದಾಖಲು ಮಾಡಿದ್ದಾರೆ ತುಳಸಿ ಮುನಿರಾಜು ಗೌಡ ಪ್ರಶ್ನೆ ಕೇಳಿದ್ದರು. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ ಎಂದು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ಚಕ್ರವರ್ತಿ ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣದಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎನ್ನುವುದಾದರೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ. ಶಿವಮೊಗ್ಗ ಕೋಮುಗಲಭೆಯನ್ನು ಅದೊಂದು ಸಣ್ಣ ಘಟನೆ ಅಂತ ಸಚಿವರು ಹೇಳಿದ್ದರು.

ಚಕ್ರವರ್ತಿ ಸೂಲಿಬೆಲೆ ಮೇಲೆ ಕಮ್ಯುನಲ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು ಅಂತ ನೀವು ಹೇಳ್ತಾ ಇದ್ದೀರಾ? ನಾವು ಇನ್ನೂ ಕಮ್ಯುನಲ್ ಕೇಸ್ ಹಾಕಿಲ್ಲ. ನೀವು ಹೇಳಿದರೆ ಕಮ್ಯುನಲ್ ಆಕ್ಟ್ ಅಡಿ ಕೇಸ್ ಹಾಕ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment