PSI ಅಕ್ರಮದಲ್ಲಿ ಬಂಧಿತನಾದ ಗಣಪತಿ ಭಟ್ ಗೃಹ ಸಚಿವರ ಪಿಎ ನಾ..? ಆರಗ ಜ್ಞಾನೇಂದ್ರ ಹೇಳಿದ್ದು ಏನು..?

suddionenews
1 Min Read

ಬೆಂಗಳೂರು: PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ಪಿಎ ಬಂಧನ ಎಂಬ ಸುದ್ದಿ ಬಂದಿರುವ ಹಿನ್ನೆಲೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. PSI ಅಕ್ರಮ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಸಿರ್ಸಿ ಮೂಲದ, ಗಣಪತಿ ಭಟ್ (62) ಎಂಬುವರನ್ನು ಇಂದು ವಿಚಾರಣೆಗೆಂದು ವಶಕ್ಕೆ ಪಡೆದು ಪ್ರಶ್ನಿಸುತ್ತಿದ್ದಾರೆ. ಈ ವ್ಯಕ್ತಿಯು ಗೃಹ ಸಚಿವರ ಕಾರ್ಯಾಲಯದ ಸಿಬ್ಬಂದಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಗಣಪತಿ ಭಟ್ ಎಂಬುವವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಶಿರಸಿ ಮೂಲದ ವ್ಯಕ್ತಿ ಗಣಪತಿ ಭಟ್. ಎಲ್ಲಾ ಹಂತದಲ್ಲಿ ತನಿಖೆ ಮಾಡಲಾಗುತ್ತಿದೆ. ಹೆಸರಿನ ವಿಚಾರದಲ್ಲಿ ಕೆಲ ಗೊಂದಲದಲ್ಲಿ ಆಗಿತ್ತು. ನನ್ನ ಕಛೇರಿಯಲ್ಲೂ ಗಣಪತಿ ಭಟ್ ಅಂತ ಇದ್ದಾರೆ. ಹೀಗಾಗಿ ಗೊಂದಲ ಆಗಿದೆ. ಸದ್ಯ ಶಿರಸಿಯಲ್ಲಿ ಗಣಪತಿ ಭಟ್ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *