Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರು ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳಿಗೆ ಅವಲಂಬಿಸುವ ಅಗತ್ಯವಿಲ್ಲ ;  ತಹಶೀಲ್ದಾರ್ ಎಂ. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ, (ಏ.07) : ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳನ್ನು ಅವಲಂಬಿಸುವ ಅಗತ್ಯವಿಲ್ಲ.

ಬದಲಾಗಿ ಈ ಸೇವೆಗಳನ್ನು ನಿಮ್ಮ ಗ್ರಾಮದ ಅಥವಾ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿ ಪಡೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದ್ದರಿಂದ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಎಂ. ರಘುಮೂರ್ತಿ ಹೇಳಿದರು.

ತಾಲ್ಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಮುಖಾಂತರ 150 ಕ್ಕೂ ಹೆಚ್ಚು ಸೌಲಭ್ಯ, ಸೇವೆಗಳು ಒಂದೇ ಸೂರಿನಡಿ ಲಭ್ಯವಿರುವುದರಿಂದ ನಾಗರಿಕ ಸಮಾಜದ ಒಬ್ಬ ಕಟ್ಟಕಡೆಯ ವ್ಯಕ್ತಿ ಅಂದಾಜು 40 ಕಿಲೋ ಮೀಟರಿಗೂ ಹೆಚ್ಚು ಅಂತರವನ್ನು ಕ್ರಮಿಸಿ ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳಿಗೆ ಬಂದು ಈ ಕಚೇರಿಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಕೆಲವೊಮ್ಮೆ ವಿದ್ಯುತ್ ವ್ಯತ್ಯಯ ಅಥವಾ ತಾಂತ್ರಿಕ ಕಾರಣಗಳಿಂದ ಹಲವು ಗಂಟೆಗಳನ್ನು ಕಳೆದು ತನ್ನ ಹಣ ಸಮಯ ಮತ್ತು ಸಂಯಮವನ್ನು ವ್ಯರ್ಥ ಮಾಡಕೂಡದೆಂದು ಸರ್ಕಾರವು ದಿಟ್ಟ ತೀರ್ಮಾನ ತೆಗೆದುಕೊಂಡಿದೆ.

ಚಳ್ಳಕೆರೆ ತಾಲೂಕಿನ 70 ಕೇಂದ್ರಗಳಲ್ಲಿ ಗ್ರಾಮ ಒನ್ ಸೆಂಟರ್ ಗಳನ್ನು ಮಂಜೂರಿ ಮಾಡಿ ಈಗಾಗಲೇ 40 ಗ್ರಾಮಪಂಚಾಯಿತಿಗಳಲ್ಲಿ ಈ ಗ್ರಾಮದ ಸೆಂಟರ್ ಗಳನ್ನು ಸ್ಥಾಪಿಸಿ 150 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.

ಕೆಲವು ನಾಗರಿಕರು ವಿನಾಕಾರಣ ತಾಲೂಕು ಕಚೇರಿಗೆ ಬಂದು ಮೇಲ್ಕಂಡಂತೆ  ನಾಗರಿಕ ಸೇವೆಗಳು ಪಡೆಯಲು ಬಂದು ತಮ್ಮ ಹಣ ಸಮಯ ಮತ್ತು ಸಂಯಮವನ್ನು ವ್ಯರ್ಥ ಮಾಡುತ್ತಿರುವುದು ವಿಷಾದದ ಸಂಗತಿ.

ದಯಮಾಡಿ ಯಾವುದೇ ನಾಗರಿಕರು ಗ್ರಾಮ ಪಂಚಾಯಿತಿ ಮಟ್ಟದಿಂದ ಈ ಸೇವೆಗಳನ್ನು ಪಡೆಯಲು ಕಚೇರಿಗೆ ಅಲೆದಾಡ ಕೂಡದೆಂದು ಮನವಿ ಮಾಡಿದರು.

ಸಾರ್ವಜನಿಕರು ನೀಡುವ ಯಾವುದೇ ಇಲಾಖೆ ಯಾವುದೇ ಸೇವೆಯ ಎಲ್ಲಾ ಅರ್ಜಿಗಳನ್ನು ಗ್ರಾಮ ಒನ್ ಸೆಂಟರ್ ನಲ್ಲಿ ಪಡೆದುಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಅದರಂತೆ ಎಲ್ಲ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದು ಸರ್ಕಾರದ ಆಶಯವು ಸಫಲವಾಗುವಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಕೋಡಿ ಭೀಮರಾವ್, ಉಪ ತಹಶೀಲ್ದಾರ್ ಚೇತನ್ ಕುಮಾರ್ ಮತ್ತು ಪಟ್ಟಣ ಪಂಚಾಯತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!