Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರು ಕಸವನ್ನು ರಸ್ತೆಗೆ ತಂದು ಸುರಿಯಬಾರದು, ಅವರ ಜವಾಬ್ದಾರಿಯೂ ಕೂಡು ಬಹಳಷ್ಟಿದೆ : ರೇಣುಕಾ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆ.12 : ಚಿತ್ರದುರ್ಗ ನಗರವನ್ನು ಪ್ಲಾಸ್ಟಿಕ್ ಮುಕ್ತ, ಸ್ವಚ್ಚ, ಹಸಿರು ನಗರವನ್ನಾಗಿಸುವ ಗುರಿಯಿಟ್ಟುಕೊಂಡಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರಾದ ರೇಣುಕ ಮನವಿ ಮಾಡಿದರು.

ಜಿಲ್ಲಾಡಳಿತ, ನಗರಸಭೆ ವತಿಯಿಂದ ಪೌರ ಕಾರ್ಮಿಕರು, ಚಾಲಕರು, ಸ್ಯಾನಿಟರಿ ಸೂಪರ್‍ವೈಸರ್, ಇತರೆ ಸಿಬ್ಬಂದಿಗಳಿಗೆ ಘನ ತ್ಯಾಜ್ಯ ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸುವ ಕುರಿತು ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷವೂ ಒಂದಲ್ಲ ಒಂದು ರೀತಿಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಆದರೆ ಮನೆ ಮನೆಗೆ ಹೋಗಿ ಹಸಿ ಕಸ ಒಣ ಕಸ ಸಂಗ್ರಹಿಸುವವರು ನೀವುಗಳು ಮೊದಲು ಕಾನೂನು ಸರಿಯಾಗಿ ತಿಳಿದುಕೊಂಡಾಗ ಸಾರ್ವಜನಿಕರಲ್ಲಿ ಅರಿವು ಮೂಡಿಸಬಹುದು. ಕಸವನ್ನು ರಸ್ತೆಗೆ ತಂದು ಸುರಿಯಬಾರದು. ಕಸ ವಿಲೇವಾರಿ ಮಾಡುವುದು ಕೇವಲ ನಗರಸಭೆ ಕೆಲಸವಲ್ಲ. ಸಾರ್ವಜನಿಕರ ಜವಾಬ್ದಾರಿ ಕೂಡು ಬಹಳಷ್ಟಿದೆ ಎನ್ನುವುದನ್ನು ಮನವರಿಕೆ ಮಾಡಿ ಇಲ್ಲದಿದ್ದರೆ ದಂಡ ವಿಧಿಸುವ ಅವಕಾಶವಿದೆ ಎಂದು ಹೇಳಿದರು.

ಹಾಸನದ ಕ್ಲಿಯರಿನ್ ಸಂಸ್ಥೆ ಸಿ.ಇ.ಓ. ಚಂದ್ರಶೇಖರ್ ಹಸಿಕಸ ಮತ್ತು ಒಣ ಕಸವನ್ನು ಸಂಗ್ರಹಿಸುವ ಕುರಿತು ಪೌರ ಕಾರ್ಮಿಕರು, ಚಾಲಕರು, ಸ್ಯಾನಿಟರಿ ಸೂಪರ್‍ವೈಸರ್ ಇತರೆ ಸಿಬ್ಬಂದಿಗಳಿಗೆ ಅರಿವು ಮೂಡಿಸಿ ಹಸಿಕಸವನ್ನು ಗೊಬ್ಬರವಾಗಿಸುವ ಬಕೆಟ್ ಪ್ರದರ್ಶಿಸಿ ಮಾತನಾಡುತ್ತ ಇದನ್ನು ಪ್ರತಿ ಮನೆಗಳಲ್ಲಿ ಉಪಯೋಗಿಸಿದರೆ ಕಸವನ್ನು ವಿಂಗಡಿಸುವ ಸಮಸ್ಯೆಯೇ ಎದುರಾಗುವುದಿಲ್ಲ. ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬೇಕು. ಏಕೆಂದರೆ ಅದು ಮಣ್ಣಿನಲ್ಲಿ ಕೊಳೆಯುವುದಿಲ್ಲ. ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.

ಪರಿಸರ ಇಂಜಿನಿಯರ್ ಜಾಫರ್ ಮಾತನಾಡಿ ಹಸಿ ಕಸ ಒಣ ಕಸವನ್ನು ಯಾರು ಬೇರ್ಪಡಿಸಿ ನಗರಸಭೆ ವಾಹನಕ್ಕೆ ಹಾಕುವುದಿಲ್ಲವೋ ಅಂತಹವರ ಪಟ್ಟಿ ಮಾಡಿಕೊಂಡು ಬನ್ನಿ ದಂಡ ವಿಧಿಸುವ ಮೂಲಕ ಜಾಗೃತರನ್ನಾಗಿಸೋಣ. ಶೆಲ್, ಟ್ಯೂಬ್‍ಲೈಟ್, ಮೊಬೈಲ್ ಚಾರ್ಜರ್ ಇವುಗಳನ್ನು ಹಸಿ ಕಸದ ಜೊತೆ ಸೇರಿಸದೆ ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ವಾಹನಕ್ಕೆ ಹಾಕುವಂತೆ ಅರಿವು ಮೂಡಿಸಿ ಎಂದು ಪೌರ ಕಾರ್ಮಿಕರು, ಚಾಲಕರು, ಸ್ಯಾನಿಟರಿ ಸೂಪರ್‍ವೈಸರ್ ಇವರುಗಳಿಗೆ ತಾಕೀತು ಮಾಡಿದರು.

ಆರೋಗ್ಯ ನಿರೀಕ್ಷಕರುಗಳಾದ ಸರಳ, ಭಾರತಿ, ನಿರ್ಮಲ, ನಾಗರಾಜ್, ಬಸವರಾಜ್ ಇವರುಗಳು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!