ಮುಂಜಾಗ್ರತ ಕ್ರಮವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದ ಪೊಲೀಸರು..!

suddionenews
1 Min Read

ಬೆಂಗಳೂರು: ಜಾತ್ರೆಗಳಲ್ಲಿ ಹಿಂದೂಯೇತರ ಸಮುದಾಯದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು, ಅವರ ವ್ಯಾಪಾರವನ್ನು ನಿಷೇಧ ಮಾಡಬೇಕು ಎಂದು ಮತ್ತೆ ಅಭಿಯಾನ, ಮನವಿ, ಬ್ಯಾನರ್ ಅಳವಡಿಕೆಯ ಸಂಪ್ರದಾಯ ಆರಂಭವಾಗಿದೆ. ಅದರ ಮುಂಜಾಗ್ರತ ಕ್ರಮವಾಗಿ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ಹಿಂದೂಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ವಿವಿ ಪುರಂನಲ್ಲಿ ಸುಬ್ರಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ನಡೆದಿದೆ. ಈ ರಥೋತ್ಸವದಲ್ಲಿ ವ್ತಾಪಾರ ಮಾಡುವುದಕ್ಕೆ ಹಿಂದೂ ಸಮುದಾಯದವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆ ಪೊಲೀಸರು ಮುಂಜಾಗ್ರತ ಕ್ರಮವಾಗಿ ನಿನ್ನೆ ಮಧ್ಯರಾತ್ರಿಯೇ ಬಸವನಗುಡಿಯ ರಾಷ್ಟ್ರ ರಕ್ಷಣಾ ಪಡೆಯ ಕಚೇರಿಗೆ ಭೇಟಿ ನೀಡಿ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ಹಿಂದೂ ಪರ ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *