Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್ ರಾಜ್‍ಕುಮಾರ್ ಅವರ ಗಂಧದಗುಡಿ ಟ್ರೈಲರ್ ಬಿಡುಗಡೆ: ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ

Facebook
Twitter
Telegram
WhatsApp

 

ಬೆಂಗಳೂರು : ವಿಶ್ವಾದ್ಯಂತ ಇಂದು ಪುನೀತ್ ರಾಜಕುಮಾರ್ ಅವರ ನಟಿಸಿದ್ದ ಕನಸಿನ ಗಂಧದಗುಡಿ ಟ್ರೈಲರ್ ಅನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ರವರು ಪಿಆರ್‌ಕೆ ಪ್ರೊಡಕ್ಷನ್ ಬ್ಯಾನರ್ ನ ಅಡಿ ಬಿಡುಗಡೆ ಮಾಡಿದ್ದಾರೆ.

ಈ ಸಂತೋಷದ ವಿಷಯವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ.

ಈ ವಿಷಯವಾಗಿ ಮಾನ್ಯ ಪ್ರಧಾನಿ ಮಂತ್ರಿಗಳಾದ ನರೇಂದ್ರ ಮೋದಿಯವರು
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು” ಎಂದು ಹಾರೈಸಿದ್ದಾರೆ.

ಇದಕ್ಕೆ ರೀ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರವರು
“ನಮಸ್ತೆ @narendramodi ಅವರೇ,
ಅಪ್ಪು ಅವರ ಹೃದಯಕ್ಕೆ ಹತ್ತಿರವಾದ ಪ್ರಾಜೆಕ್ಟ್ #ಗಂಧದಗುಡಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡುತ್ತಿರುವ ನಮಗೆ ಇಂದು ಭಾವನಾತ್ಮಕ ದಿನ. ಅಪ್ಪು ಯಾವಾಗಲೂ ನಿಮ್ಮೊಂದಿಗಿನ ಸಂವಾದಗಳನ್ನು ಪಾಲಿಸುತ್ತಿದ್ದರು ಮತ್ತು ನಿಮ್ಮೊಂದಿಗೆ ವೈಯಕ್ತಿಕವಾಗಿ ಹಂಚಿಕೊಳ್ಳಲು ಇಷ್ಟಪಡುತ್ತಿದ್ದರು” ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈಗಾಗಲೇ ಲಕ್ಷಾಂತರ ವೀಡಿಯೋ ವೀಕ್ಷಿಸಿರುವ ಅಭಿಮಾನಿಗಳು ತಮ್ಮ ಆರಾಧ್ಯ ನಟನ ಬಗ್ಗೆ ಭಾವನಾತ್ಮಕವಾಗಿ ಶುಭಹಾರೈಸುವುದರ ಮೂಲಕ ಚಿತ್ರ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

ಟ್ರೈಲರ್ ನ ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ:

ವರದಿ:
ಅರ್ಜಿತ್ ಗೋವಿಂಧನ್,  97417 38979

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!