Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್‍ರಾಜ್‍ಕುಮಾರ್ ವಿಧಿವಶ : ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ :   ಡಾ.ಶಿವಮೂರ್ತಿ ಮುರುಘಾ ಶರಣರು

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ಅ.30) : ಚಿಕ್ಕ ವಯಸ್ಸಿನಲ್ಲಿಯೇ ನಟನೆಯ ಮೂಲಕ ಚಿತ್ರರಂಗ ಪ್ರವೇಶಿಸಿದ ಪುನಿತ್‍ರಾಜ್‍ಕುಮಾರ್ ವಿಧಿವಶರಾಗಿರುವುದು ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ ಎಂದು ಮುರುಘಾಮಠದ ಡಾ.ಶಿವಮೂರ್ತಿ ಶರಣರು ದುಃಖ ವ್ಯಕ್ತಪಡಿಸಿದರು.

ಶಾರದ ಬ್ರಾಸ್‍ಬ್ಯಾಂಡ್ ವತಿಯಿಂದ ಶನಿವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ದಾಂಜಲಿ ಮೆರವಣಿಗೆಗೆ ಪುನಿತ್ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ಮಾತನಾಡಿದ ಮುರುಘಾಶರಣರು ಅಮೋಘವಾದ ನಟನೆಯ ಮೂಲಕ ಅಭಿಮಾನಿಗಳಿಂದ ಪವರ್‌ ಸ್ಟಾರ್ ಎಂದು ಕರೆಸಿಕೊಂಡ ಪುನಿತ್‍ರಾಜ್‍ಕುಮಾರ್ ಅಗಲಿಕೆ ಕರುನಾಡನ್ನೆ ದುಃಖದಲ್ಲಿ ಮುಳುಗಿಸಿದೆ. ಭಗವಂತ ಅವರ ಕುಟುಂಬಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.

ಸುಮಾರು ಮೂವತ್ತು ಚಿತ್ರಗಳಲ್ಲಿ ನಟಿಸಿರುವ ಪುನಿತ್‍ರಾಜ್‍ಕುಮಾರ್ ಸರಳ ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿದ್ದರು. ತಾನೊಬ್ಬ ಮೇರುನಟ ಎಂದು ಎಲ್ಲಿಯೂ ಗರ್ವದಿಂದ ಬೀಗಲಿಲ್ಲ. ಅವರಲ್ಲಿರುವ ವಿನಯತೆ ಈ ಮಟ್ಟಕ್ಕೇರಲು ನೆರವಾಯಿತು ಎಂದು ಶರಣರು ದುಃಖಭರಿತರಾದರು.

ಶಾರದ ಬ್ರಾಸ್‍ಬ್ಯಾಂಡ್‍ನ ಎಸ್.ವಿ.ಗುರುಮೂರ್ತಿ, ಜಿ.ಸಾಯಿಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಹೆಚ್.ಸಿ.ನಿರಂಜನಮೂರ್ತಿ, ಹೆಚ್.ಮಂಜಪ್ಪ, ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ನಗರಸಭೆ ಮಾಜಿ ಉಪಾಧ್ಯಕ್ಷ ಬಿ.ರಾಮಜ್ಜ, ತಿಪ್ಪೇಸ್ವಾಮಿ, ರುದ್ರೇಶ್, ಪಿ.ಸಿ.ವೀರಣ್ಣ, ಕಾಂಗ್ರೆಸ್ ಮುಖಂಡ ಚಿದಾನಂದಮೂರ್ತಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿದ್ದರು.

ಭಾವಪೂರ್ಣ ಶ್ರದ್ದಾಂಜಲಿ ಮೆರವಣಿಗೆ ರಂಗಯ್ಯನಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿತು. ಶಾರದ ಬ್ರಾಸ್‍ಬ್ಯಾಂಡ್‍ನ ಕಲಾವಿದರು ಡಾ.ರಾಜ್ ಮತ್ತು ಪುನಿತ್‍ರವರ ಅಮರ ಗೀತೆಗಳನ್ನು ಹಾಡಿ ಶ್ರದ್ದಾಂಜಲಿ ಸಲ್ಲಿಸಿದರು.

ಶ್ರದ್ದಾಂಜಲಿ ಮೆರವಣಿಗೆ ಸಾಗಿದ ರಸ್ತೆಯ ಎರಡು ಬದಿಗಳಲ್ಲಿ ಅಭಿಮಾನಿಗಳು ನಿಂತು ಸಂತಾಪ ಸೂಚಿಸಿದರು.

ಫೋಟೋ ವಿವರಣೆ: ಶಾರದ ಬ್ರಾಸ್‍ಬ್ಯಾಂಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾವಪೂರ್ಣ ಶ್ರದ್ದಾಂಜಲಿ ಮೆರವಣಿಗೆಯಲ್ಲಿ ಮುರುಘಾಮಠದ ಡಾ.ಶಿವಮೂರ್ತಿ ಶರಣರು ಪುನಿತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.    ಫೋಟೋ-1.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!