Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೌಜನ್ಯದ ಮೂರ್ತಿ ಪುನೀತ್‍ರಾಜ್‍ಕುಮಾರ್ ಸಾವು ನಾಡಿಗೆ ಆಘಾತ : ಮಾಜಿ ಸಚಿವ ಎಚ್.ಆಂಜನೇಯ

Facebook
Twitter
Telegram
WhatsApp

ಚಿತ್ರದುರ್ಗ, (ಅ.29) :  ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ನಟರೊಂದಿಗೆ ಪಾತ್ರ ನಿರ್ವಹಿಸಿ, “ಅಪ್ಪು” ಎಂದೇ ದಿಗ್ಗಜ ನಟರ, ಕನ್ನಡ ನಾಡಿನ ಜನರ ಪ್ರೀತಿಗೆ ಪಾತ್ರರಾಗಿದ್ದ ಕನ್ನಡ ನಾಡಿನ ದೊಡ್ಡ ನಟ ಪುನೀತ್ ರಾಜ್‍ಕುಮಾರ್ ನಿಧನ ಚಿತ್ರರಂಗಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ವಯಸ್ಸು ಕಿರಿದು, ನಟನೆ ಹಿರಿದು ಪುನೀತ್ ಹೆಗ್ಗಳಿಕೆ ಆಗಿತ್ತು. ಅಣ್ಣಾವ್ರ ರೀತಿಯೇ ಸೌಜನ್ಯದ ಮೂರ್ತಿಯಂತೆ ಹಿರಿಯರು, ಕಿರಿಯರನ್ನು ಗೌರವಿಸುವ ಗುಣ ಹೊಂದಿದ್ದರು.
ಡಾ.ರಾಜ್‍ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಷ್, ಡಾ.ರವಿಚಂದ್ರನ್, ಶಂಕರನಾಗ್, ಅನಂತನಾಗ್ ಸೇರಿದಂತೆ ಅನೇಕ ದಿಗ್ಗಜ ನಟರ ಸಾಲಿನತ್ತ ಸಾಗುತ್ತಿದ್ದ ಪುನೀತ್, ಅಣ್ಣಾವ್ರ ಸ್ಥಾನ
ತುಂಬುವ ರೀತಿಯಲ್ಲಿಯೇ ನಟನೆ ಹಾಗೂ ವೈಯಕ್ತಿಕ ಬದುಕನ್ನು ರೂಪಿಸಿಕೊಂಡಿದ್ದರು.

ಮಧ್ಯ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಚಕ್ರವರ್ತಿ ಎಂದೇ ಗುರುತಿಸಿಕೊಂಡಿದ್ದ ಪುನೀತ್ ರಾಜ್‍ಕುಮಾರ್, ಚಿಕ್ಕ ವಯಸ್ಸಿನಲ್ಲಿಯೇ ಬಾರದ ಊರಿಗೆ ಹೋಗಿದ್ದು ನಾಡಿನ ದುರಂತ.
ಹೃದಯವಂತಿಕೆ, ಸರಳತೆ, ಸೌಜನ್ಯತೆ, ಅಪ್ರತಿಮ ನಟನೆ ಹೀಗೆ ಅನೇಕ ಕಾರಣಕ್ಕೆ ಚಿಕ್ಕ
ವಯಸ್ಸಿನಲ್ಲಿಯೇ ನಾಡಿನ ಜನರ, ದಿಗ್ಗಜ ನಟರ, ನಿರ್ಮಾಪಕರ, ರಾಜಕಾರಣಗಳ, ಸಾಹಿತಿಗಳ
ಮನಗೆದ್ದಿದ್ದ ಪುನೀತ್ ಅಕಾಲಿಕ ಸಾವು ನನ್ನಂತಹ ಕೋಟ್ಯಂತರ ಜನರಿಗೆ ತೀವ್ರ ಆಘಾತವನ್ನು
ಉಂಟು ಮಾಡಿದೆ.

ರಾಜ್‍ಕುಮಾರ್ ರೀತಿಯೇ ಕೌಟಂಬಿಕ ಚಿತ್ರಗಳತ್ತ ಹೆಚ್ಚು ಆಸಕ್ತಿ ಹೊಂದಿದ್ದ ಪುನೀತ್, ಕುಟುಂಬದ ಸದಸ್ಯರೆಲ್ಲರೂ ಕುಳಿತು ನೋಡುವಂತ ಚಿತ್ರಗಳಲ್ಲಿ ನಡೆಸುವ ಆಸೆ ಹೊಂದಿದ್ದು, ಅದರಂತೆ ಅಂತಹ ಚಿತ್ರಗಳಲ್ಲಿಯೇ ಹೆಚ್ಚಾಗಿ ನಟಿಸಿದ್ದಾರೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ.

ತಂದೆ ರಾಜ್‍ಕುಮಾರ್ ರೀತಿ ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪುನೀತ್ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಸದಾ ಇರುತ್ತಾರೆ.

ದೊಡ್ಡ ನಟನಾಗಿ ಹೊರಹೊಮ್ಮಿದ್ದ ಪುನೀತ್ ರಾಜಕುಮಾರ್ ಅಕಾಲಿಕ ಅಗಲಿಕೆ ನೋವನ್ನು
ತಡೆದುಕೊಳ್ಳುವ ಶಕ್ತಿ ಕುಟುಂಬ ವರ್ಗ, ಅಭಿಮಾನಿಗಳು, ಕನ್ನಡ ನಾಡಿನ ಜನತೆಗೆ ಬಸವಾದಿ ಶರಣರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!