Punjab election: ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದ ಎಎಪಿ.. ಪಂಜಾಬ್ ಜನರ ಆಯ್ಕೆ ಇವರೇ ನೋಡಿ..!

ನವದೆಹಲಿ: ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಿದೆ. ಫೆಬ್ರವರಿ 10 ರಿಂದ ನಡೆಯುವ ಚುನಾವಣೆಗೆ ಪಕ್ಷಗಳು ಅಭ್ಯರ್ಥಿಗಳ ಕಡೆ ಗಮನ ಹರಿಸಿವೆ. ಜೊತೆಗೆ ಪ್ರಚಾರದ ಫ್ಲ್ಯಾನ್ ಸಿದ್ಧಪಡಿಸಿಕೊಳ್ಳುತ್ತಿವೆ. ಈ ಮಧ್ಯೆ ದೆಹಲಿ ಸಿಎಂ ವಿಭಿನ್ನವಾಗಿ ಥಿಂಕ್ ಮಾಡಿದ್ದಾರೆ.

ಹೌದು, ಸಿಎಂ ಕೇಜ್ರಿವಾಲ್ ಪಂಜಾಬ್ ಮತದಾರರನ್ನ ಸೆಳೆಯಲು ಸಿಎಂ ಅಭ್ಯರ್ಥಿ ಆಯ್ಕೆಯನ್ನ ಜನರಿಗೆ ಬಿಟ್ಟಿದ್ದರು. ಇದೀಗ ಪಂಜಾಬ್ ಜನರೇ ತಮ್ಮ ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನಿಸಿದ್ದಾರೆ. ಜನರ ಆಯ್ಕೆಗೆ ತಕ್ಕಂತೆ ಎಎಪಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.

ಪಂಜಾಬ್ ನ ಸಂಗ್ರೂರ್ ಕ್ಷೇತ್ರದಿಂದ ಅದಾಗಲೇ ಎರಡು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ಭಗವಂತ್ ಮಾನ್ ಅವರನ್ನೇ ಜನ ಈ ಬಾರಿಯ ಮುಖ್ಯಮಂತ್ರಿ ಆಗುವಂತೆ ಬಯಸಿದ್ದಾರೆ. ಎಎಪಿ ಪಕ್ಷ ನಿಮ್ಮ ಮುಖ್ಯಮಂತ್ರಿಯನ್ನ ನೀವೆ ಆಯ್ಕೆ ಮಾಡಿ ಎಂದು ಒಂದು ಫೋನ್ ನಂಬರ್ ನೀಡಿತ್ತು. ಅದಕ್ಕೆ ವಾಟ್ಸಾಪ್, ಕರೆ ಮಾಡುವ ಮೂಲಕ ಮುಖ್ಯಮಂತ್ರಿ ಹೆಸರನ್ನ ಸೂಚಿಸಲು ತಿಳಿಸಲಾಗಿತ್ತು. ಅದರಂತೆ 97 ರಷ್ಟು ಜನ ಆಯ್ಕೆ‌ಮಾಡಿರುವುದು ಭಗವಂತ್ ಮಾನ್ ಅವರನ್ನ. ಇನ್ನಳಿದ 3% ಜನ ನವಜೋತ್ ಸಿಂಗ್ ಸಿಧು ಅವರನ್ನ ಆಯ್ಕೆ ಮಾಡಿದ್ದಾರೆ.

ಜನರ ಆಯ್ಜೆ ಅನುಸಾರ ಎಎಪಿಯಿಂದ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗಿದೆ. ಜನರೇ ಅಯ್ಕೆ ಮಾಡಿರುವ ಕಾರಣ ಈ ಬಾರಿ ಪಂಜಾಬ್ ನಲ್ಲಿ ಎಎಪು ಗೆಲುವು ಖಚಿತ ಎಂಬ ಭರವಸೆ ಕೇಜ್ರಿವಾಲ್ ಬಳಗಕ್ಕೆ ಹುಟ್ಟಿಕೊಂಡಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

52 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago