ರೈತರ ಮೇಲೆ ಪಂಜಾಬ್ ಸರ್ಕಾರದ ದೌರ್ಜನ್ಯ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ದೆಹಲಿ ಗಡಿಯಲ್ಲಿ ಚಳುವಳಿನಿರತ ರೈತರ ಮೇಲೆ ಪಂಜಾಬ್ ಸರ್ಕಾರ ದೌರ್ಜನ್ಯ ನಡೆಸಿರುವುದನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಂಯುಕ್ತ ಹೋರಾಟ ಕರ್ನಾಟಕದಿಂದ ಜಿಲ್ಲಾಧಿಕಾರಿ ಮೂಲಕ ಶುಕ್ರವಾರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕೃಷಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಒಂದು ವರ್ಷ ಐದು ತಿಂಗಳ ಕಾಲ ದೆಹಲಿಯಲ್ಲಿ ರೈತರು ಮುಷ್ಕರ ನಡೆಸಿದಾಗ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರಮೋದಿ ಭರವಸೆ ನೀಡಿ ಇದುವರೆವಿಗೂ ಕರಾಳ ಕಾಯಿದೆಗಳನ್ನು ವಾಪಸ್ ಪಡೆದಿಲ್ಲ. ರಾಷ್ಟ್ರೀಯ ಹಿತಾಸಕ್ತಿಗಳಿಗೆ ಕಂಟಕವಾಗಿರುವ ಯುಎಸ್. ಸೇರಿದಂತೆ ಇತರೆ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳಿಗಾಗಿ ನಡೆಯುತ್ತಿರುವ ಮಾತುಕತೆಗಳನ್ನು ತಕ್ಷಣ ನಿಲ್ಲಿಸಬೇಕು. ರೈತರು ಬೆಳೆಯುವ ಎಲ್ಲಾ ರೀತಿಯ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿಪಡಿಸಬೇಕು. ರೈತರು ಮತ್ತು ಕಾರ್ಮಿಕರ ಸಾಲಗಳನ್ನು ಮನ್ನಾ ಮಾಡುವುದು ಸೇರಿದಂತೆ ಕೃಷಿ ಮತ್ತು ಗ್ರಾಮೀಣ ವಲಯಗಳಲ್ಲಿ ವಿದ್ಯುತ್ ದರ ಹೆಚ್ಚಳ ಸ್ಮಾರ್ಟ್ ಮೀಟರ್ ಹೇರಿಕೆಯನ್ನು ಹಿಂದಕ್ಕೆ ಪಡೆಯಬೇಕು. ಕೊಳವೆ ಬಾವಿಗಳಿಗೆ ಉಚಿತ ವಿದ್ಯುತ್, ಗೃಹ ಬಳಕೆ ಮತ್ತು ಅಂಗಡಿಗಳಿಗೆ ಮುನ್ನೂರು ಯೂನಿಟ್ ವಿದ್ಯುತ್ ಮಂಜೂರು ಮಾಡುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿತು.

ಕುಮಾರ್ ಸಮತಳ, ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಸತ್ಯಪ್ಪ ಮಲ್ಲಾಪುರ, ಕೆ.ಎಂ.ಕಾಂತರಾಜು, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪುರಷೋತ್ತಮ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

Recent Posts

ಪಿತ್ತ ಬೇಗ ಕಡಿಮೆ ಆಗ್ಬೇಕು ಅಂದ್ರೆ ಹೀಗೆ ಮಾಡಿ

ಸಾಕಷ್ಟು ಜನರಿಗೆ ಪಿತ್ತದ ಸಮಸ್ಯೆ ಇರುತ್ತದೆ.‌ ಪಿತ್ತ ಜಾಸ್ತಿಯಾದಷ್ಟು ಮನುಷ್ಯನಿಗೆ ಕಂಫರ್ಟಬಲ್ ಇರುವುದೇ ಇಲ್ಲ. ಪಿತ್ತ ಹೆಚ್ಚಾದರೆ ತಲೆ ಸುತ್ತು…

5 hours ago

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ, ಈ ರಾಶಿಯ ಗಂಡ ಹೆಂಡತಿ ಎಷ್ಟುಚೆನ್ನಾಗಿದ್ದರೆ ಗೊತ್ತು, ಶನಿವಾರದ ರಾಶಿ ಭವಿಷ್ಯ…

6 hours ago

ದೇಶದ ಮೊದಲ ಹಿಂದೂ ಗ್ರಾಮಕ್ಕೆ ಶಂಕುಸ್ಥಾಪನೆ : ಈ ಗ್ರಾಮದ ವಿಶೇಷತೆ ಏನು ಗೊತ್ತಾ ?

  ಸುದ್ದಿಒನ್ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿರುವ ಬಾಗೇಶ್ವರ ಧಾಮ ಪೀಠದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಏಪ್ರಿಲ್ 2 ರಂದು…

13 hours ago

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ; ಕಾರಣವೇನು..?

ಅಣ್ಣಾಮಲೈ ಅಂದ್ರೆನೇ ಅದೆಷ್ಟೋ ಜನ ಗಢಗಢ ಅಂತ ನಡುಗುತ್ತಾ ಇದ್ದರು. ಕರ್ನಾಟಕದ ರಿಯಲ್ ಸಿಂಗಂ ಆಗಿ ಘರ್ಜಿಸಿದ್ದರು. ಆದರೆ ಬಿಜೆಪಿಗೆ…

14 hours ago

ಚಿನ್ನ – ಬೆಳ್ಳಿ ಬೆಲೆ ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ಇಳಿಕೆ ; ಕಾರಣವೇನು..? ಅಕ್ಷಯ ತೃತೀಯ ತನಕವೂ ಇಳಿಯಲಿದೆಯಾ..?

  ಚಿನ್ನ ಬೆಳ್ಳಿ ದರ ಏರಿಕೆಯತ್ತಲೇ ಸಾಗುತ್ತಿತ್ತು. ಇಂದು ಮಹಿಳೆಯರ ಚಿನ್ನದ ಕನಸಿಗೆ ಬೇಸರವನ್ನೇ ತಂದಿತ್ತು. ಇದೀಗ ದಿಢೀರನೇ ಚಿನ್ನ…

16 hours ago

ಸೃಜನಶೀಲ ಯುವ ಬರಹಗಾರರಿಗೆ ಆರ್ಥಿಕ ನೆರವು ನೀಡಿ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 04…

16 hours ago