Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ

---Advertisement---

 

ಚಿತ್ರದುರ್ಗ.  ಮಾ.16:  ಪ್ರಸಕ್ತ ಸಾಲಿನ ಕನಿಷ್ಟ ಬೆಂಬಲ ಬೆಲೆ ಚಿತ್ರದುರ್ಗ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಸಭಾ ನಡವಳಿಯಂತೆ ಪ್ರತಿ ರೈತರಿಂದ ರಾಗಿ ಉತ್ಪಾದನೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ  ಪ್ರತಿ ಕ್ವಿಂಟಾಲ್‍ಗೆ ರೂ.3846/- ರಂತೆ ಎಲ್ಲಾ ರೈತರಿಂದ ರಾಗಿ ಖರೀದಿಸಲಾಗುತ್ತದೆ.

ಹೊಸದುರ್ಗ ತಾಲ್ಲೂಕು ಎಪಿಎಂಸಿ ಪ್ರಾಂಗಣ–1, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಎಪಿಎಂಸಿ ಪ್ರಾಂಗಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ರೈತರು ರಾಗಿ ನೊಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ “ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ವ್ಯವಸ್ಥೆ” ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...