Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ: ನೋಂದಣಿಗೆ ಅವಕಾಶ

---Advertisement---

ಚಿತ್ರದುರ್ಗ. ಸೆಪ್ಟೆಂಬರ್.21: ಜಿಲ್ಲಾಧಿಕಾರಿಗಳ ನಿರ್ದೇಶನದಂತೆ 2024-25ನೇ ಸಾಲಿನ ಕರ್ನಾಟಕ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಹೆಸರು ಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್ ಪೋರ್ಸ್ನಲ್ಲಿ ತೀರ್ಮಾನಿಸಲಾಗಿದ್ದು, ಪ್ರೂಟ್ಸ್ ಐಡಿಯೊಂದಿಗೆ ರೈತರು ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಜಿಲ್ಲಾ ವ್ಯವಸ್ಥಾಪಕರು ಕೋರಿದ್ದಾರೆ.

ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಹೆಸರು ಕಾಳು ಖರೀದಿ ಮಾಡಲು “ಎನ್‌ಸಿಸಿಎಫ್” ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಚಿತ್ರದುರ್ಗ ಶಾಖೆಯ ಹೊಸದುರ್ಗ ತಾಲ್ಲೂಕಿನಲ್ಲಿ ಪಿಎಸಿಎಸ್ ಹೊಸದುರ್ಗ ರಸ್ತೆ ಮತ್ತು ಪಿಎಸಿಎಸ್ ಶ್ರೀರಾಂಪುರ ಹಾಗೂ ಹಿರಿಯೂರು ತಾಲ್ಲೂಕಿನಲ್ಲಿ ಪಿಎಸಿಎಸ್ ಐಮಂಗಲ ಮತ್ತು ಪಿಎಸಿಎಸ್ ಬಬ್ಬೂರು ಸಹಕಾರ ಸಂಘದಲ್ಲಿ ಹೆಸರು ಕಾಳು ನೋಂದಣಿಗೆ ಅವಕಾಶವಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 2 ಕ್ವಿಂಟಾಲ್‌ನAತೆ ಗರಿಷ್ಟ 10 ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್ಪೋರ್ಸ್ನಲ್ಲಿ ತೀರ್ಮಾನಿಸಲಾಗಿದೆ. ಪ್ರೂಟ್ಸ್ ಐಡಿಯೊಂದಿಗೆ ರೈತರು ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಪಿಎಸಿಎಸ್ ಹೊಸದುರ್ಗ ರಸ್ತೆ ಸಹಕಾರ ಸಂಘದ ಕಾರ್ಯದರ್ಶಿ-9008558668, ಪಿಎಸಿಎಸ್ ಶ್ರೀರಾಂಪುರ ಸಹಕಾರ ಸಂಘದ ಕಾರ್ಯದರ್ಶಿ-9844820821, ಪಿಎಸಿಎಸ್ ಐಮಂಗಲ ಸಹಕಾರ ಸಂಘದ ಕಾರ್ಯದರ್ಶಿ-9986182809, ಪಿಎಸಿಎಸ್ ಬಬ್ಬೂರು ಸಹಕಾರ ಸಂಘದ ಕಾರ್ಯದರ್ಶಿ-8088146803 ಗೆ ಸಂಪರ್ಕಿಸುವAತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಚಿತ್ರದುರ್ಗ ಶಾಖಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment