Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಶ್ರೀ ರಾಘವೇಂದ್ರ ಸ್ವಾಮಿಗಳ  ಮಠದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಪೂರ್ವಾರಾಧನೆ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಆ.31 : ಇಲ್ಲಿನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರುತ್ತಿದೆ.

ಶ್ರೀ ಮಠದಲ್ಲಿ ಆರಾಧನಾ ಮಹೋತ್ಸವದ ಮೂರನೆಯ ಪೂರ್ವಾರಾಧನೆ ದಿನವಾದ ಇಂದು ಬೆಳಿಗ್ಗೆಯಿಂದಲೇ ಶ್ರೀ ಗುರುರಾಯರ ವೃಂದಾವನಕ್ಕೆ ನಿರ್ಮಾಲ್ಯ, ಅಷ್ಟೋತ್ತರ ಸಹಿತ ವಿಶೇಷ ಫಲ ಪಂಚಾಮೃತ ಅಭಿಷೇಕ,  ವಿಶೇಷ ಬಾಳೆದಿಂಡಿನ ಅಲಂಕಾರ, ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ, ಮಧ್ಯಾಹ್ನ ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದಗಳು ನೆರವೇರಿದವು. ಸಾವಿರಾರು ಮಂದಿ ಭಕ್ತಾದಿಗಳು ಅನ್ನದಾನ ಪ್ರಸಾದ ಸ್ವೀಕರಿಸಿದರು.

ಈ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ಶ್ರೀ ಪಾಂಡುರಂಗ ಭಜನಾಮಂಡಳಿಯವರಿಂದ ಭಜನೆ, ಶ್ರೀಮತಿ ಸಿಂಧೂರ, ಕುಮಾರಿ ಸೌಂದರ್ಯ, ಸಂಗೀತಾ ಅವರಿಂದ ಭರತನಾಟ್ಯ ಕಾರ್ಯಕ್ರಮಗಳು ನಡೆಯುತ್ತಿವೆ.

ತದನಂತರದಲ್ಲಿ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾಮಂಗಳಾರತಿಯ ಕಾರ್ಯಕ್ರಮಗಳು ನಡೆಯಲಿವೆ.

ಸೆಪ್ಟೆಂಬರ್ 1 ರಂದು ಮಧ್ಯಾರಾಧನೆ ಹಾಗೂ ಹಾಗೂ ಸೆಪ್ಟೆಂಬರ್ 2 ರಂದು ಉತ್ತರಾರಾಧನೆಯ ಕಾರ್ಯಕ್ರಮಗಳಲ್ಲಿಯೂ ಸಕಲ ಸದ್ಭಕ್ತರು ಪಾಲ್ಗೊಂಡು ಶ್ರೀ ಗುರುರಾಯರ ದರ್ಶನ ಪಡೆದು ಪ್ರಸಾದಾನುಗ್ರಹಗಳಿಗೆ ಭಾಜನರಾಗಬೇಕೆಂದು ಶ್ರೀಮಠದ ವ್ಯವಸ್ಥಾಪಕರಾದ ಪ್ರಾಣೇಶ್ ಕೊಪ್ಪರ್ ಅವರು ಹಾಗೂ ಗೌರವ ವಿಚಾರಣಕರ್ತರಾದ ಗೋವಿಂದಮೂರ್ತಿ ಅವರು ಸದ್ಭಕ್ತರಲ್ಲಿ ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!