Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡರ ಅಟ್ಟಹಾಸ ಮಟ್ಟಹಾಕಿ : ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.18 : ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡರು ಕನ್ನಡಪರ ಹೋರಾಟಗಾರರಾದ ಅನಿಲ್ ದಡ್ಡಮನಿ, ಸಂಪತ್‍ಕುಮಾರ್ ಇವರುಗಳಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಹಾರಾಷ್ಟ್ರದ ಗಡಿಭಾಗದಲ್ಲಿರುವ ಬೆಳಗಾವಿಯಲ್ಲಿ ಮರಾಠಿ ಎಂ.ಇ.ಎಸ್.ನವರು ಕನ್ನಡಪರ ಹೋರಾಟಗಾರರನ್ನು ಪದೆ ಪದೆ ಅವಮಾನಿಸುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅನಿಲ್‍ದಡ್ಡಮನಿ, ಸಂಪತ್‍ಕುಮಾರ್ ಇವರುಗಳಿಗೆ ಇನ್‍ಸ್ಟಾಗ್ರಾಂನಲ್ಲಿ ಕೊಲೆ ಬೆದರಿಕೆ ಹಾಕಿರುವವರನ್ನು ಕೂಡಲೆ ಬಂಧಿಸಿ ಎಂ.ಇ.ಎಸ್.ನ್ನು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರುನಾಡ ವಿಜಯಸೇನೆಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಕಾಂಗ್ರೆಸ್, ಬಿಜೆಪಿ. ಜೆಡಿಎಸ್. ಮೂರು ಪಕ್ಷಗಳು ಮರಾಠಿಗರ ಮತಕ್ಕಾಗಿ ಕನ್ನಡಕ್ಕೆ ಎಷ್ಟೆ ಅವಮಾನವಾದರೂ ನೋಡಿಕೊಂಡು ಸುಮ್ಮನಿರುವುದು ಯಾವ ನ್ಯಾಯ?
ಕನ್ನಡ ನಾಡಿನ ಹಿತದೃಷ್ಟಿಯಿಂದ ಎಂ.ಇ.ಎಸ್. ಪುಂಡಾಟಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮೂರು ಪಕ್ಷಗಳಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷೆ ರತ್ನಮ್ಮ, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ನಗರಾಧ್ಯಕ್ಷ ಅವಿನಾಶ್, ಮಹಮದ್ ರಫಿ, ಶಾನ್, ಸುರೇಶ್, ಅಖಿಲೇಶ್, ಹರೀಶ್, ಪ್ರದೀಪ್, ರಾಜಣ್ಣ, ಮಣಿಕಂಠ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment