Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಜಾತಿ ಕಾಲಂನಲ್ಲಿ ಸಿದ್ದರಾಮಯ್ಯ, ಡಿಕೆಶಿ ಹೆಸರು ಹಾಕಿ : ವಿ.ಸೋಮಣ್ಣ ಗರಂ..!

---Advertisement---

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆಯಿಂದ ಜಾತಿಗಣತಿ ಚುರುಕು ಪಡೆದುಕೊಂಡಿದೆ. ಜಾತಿ ಗಣತಿಗೆ ಬೇಕಾದ ಪ್ರಶ್ನೆಗಳಷ್ಟೇ ಇಲ್ಲದೆ, ಹಲವು ಬೇಡದ ಪ್ರಶ್ನೆಗಳನ್ನೇ ಕೇಳಲಾಗಿದೆ ಎಂದು ಹಲವರು ಆಕ್ರೋಶ ಹೊರ ಹಾಕಿದ್ದಾರೆ. ಇದೀಗ ಕೇಂದ್ರ ಸಚಿವ, ತುಮಕೂರು ಸಂಸದ ವಿ ಸೋಮಣ್ಣ ಕೂಡ ಜಾತಿಗಣತಿಯಲ್ಲಿರುವ ಪ್ರಶ್ನೆಗಳಿಗೆ ಗರಂ ಆಗಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಮನೆಗೆ ಗಣತಿದಾರರು ಸಮೀಕ್ಷೆಗೆ ತೆರಳಿದ್ದರು. ಅದರಲ್ಲೂ 9 ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ ಉಪಜಾತಿ ಯಾವುದು ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಸೋಮಣ್ಣ, ಅದೆಲ್ಲಾ ಯಾಕೆ ಬೇಕು. ಸಿದ್ದರಾಮಯ್ಯ ಜಾತಿ ಎಂದಿ ಬರೆದುಕೊಳ್ಳಿ. ಮದುವೆ ಆದಾಗ ನಿಮಗೆ ಎಷ್ಟು ವರ್ಷ ಅಂತ ಕೇಳಿದಾಗ ದುರಂತ ನಮ್ಮ ಅಮ್ಮನ ಕೇಳಬೇಕು 26 ಅಂತ ಬರೆದುಕೊಳ್ಳಿ ಎಂದಿದ್ದಾರೆ.

ಇದು ಸಿದ್ದರಾಮಯ್ಯ ಅವರು ವೋಟ್ ಗಾಗಿ ಸಮೀಕ್ಷೆ ಮಾಡಿಸುತ್ತಿರುವುದು. ಯಾರೂ ಅವಿವೇಕಿಗಳು ಹೇಳಿ. ಇದರಲ್ಲಿನ ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಂತಾನೇ ಹಾಕಿಕೊಳ್ಳಿ ಎಂದಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಾ..? ನಮ್ಮ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಗಣತಿ ಮಾಡಿಸುತ್ತದೆ. ಅದನ್ನ ನೀವೇ ನೋಡಿವಿರಂತೆ. ಹೇಗೆ ಮಾಡಿಸುತ್ತದೆ ಎಂದು. ಸರ್ಕಾರಿ ನೌಕರರು ಸರ್ಕಾರದ ಏಜೆಂಟ್ ಆಗಬಾರದು. ಇಷ್ಟು ಜನ ಯಾಕೆ ಬಂದಿದ್ದೀರಿ..? ಇಷ್ಟು ಪ್ರಶ್ನೆಗಳು ಬೇಕಾ..? ಇದೆಲ್ಲಾ ನೀವೂ ಸರ್ಕಾರಕ್ಕೆ ತಿಳಿಸಬೇಕಲ್ವಾ ಎಂದು ಗಣತಿದಾರರಿಗೆ ವಿ ಸೋಮಣ್ಣ ಅವರು ಪ್ರಶ್ನೆ ಮಾಡಿದ್ದಾರೆ. ನಿನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹ ಬೇಸರ ಮಾಡಿಕೊಂಡಿದ್ದರು. ಇಷ್ಟೊಂದು ಪ್ರಶ್ನೆಗಳ ಅಗತ್ಯತೆ ಇದೆಯಾ ಎಂದು ಕೇಳಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now