Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ವೈ ಆಪ್ತ ಪುಟ್ಟಸ್ವಾಮಿ ರಾಜಕೀಯ ಬಿಟ್ಟು ತೈಲೇಶ್ವರ ಮಠದಲ್ಲಿ ಮಠಾಧೀಶರಾಗಲು ಹೊರಟಿದ್ದಾರೆ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಪುಟ್ಟಸ್ವಾಮಿ ಅವರು ಅದ್ಯಾಕೋ ರಾಜಕೀಯ ಬಿಟ್ಟು ಮಠ ಸೇರಿಕೊಳ್ಳಲು ಸಿದ್ಧರಾಗಿದ್ದಾರೆ. ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿಯಲ್ಲಿರುವ ಮಠಕ್ಕೆ ಮಠಾಧೀಶರಾಗಲು ಹೊರಟಿದ್ದಾರೆ. ಪುಟ್ಟಸ್ವಾಮಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದವರು. ಆದ್ರೆ ಈಗ ಪೂರ್ಣಾನಂದ ಸ್ವಾಮೀಜಿಯಾಗಲಿದ್ದಾರೆ.

 

ಮಾದನಾಯಕನಹಳ್ಳಿಯ ತೈಲೇಶ್ವರ ಗಾಣಿಗರ ಸಂಸ್ಥಾಪನ ಮಠಕ್ಕೆ ಮೊದಲ ಪೀಠಾಧಿಪತಿಯಾಗಲಿದ್ದಾರೆ. ರಾಜಕೀಯಕ್ಕೆ ರಾಜೀನಾಮೆ ನೀಡಿ ತಮ್ಮ 82 ವರ್ಷಕ್ಕೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ. ಸದ್ಯ ಇರುವ ಸ್ಥಾನವನ್ನು ಶೀಘ್ರದಲ್ಲೆ ತೊರೆಯಲಿದ್ದಾರೆ. ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಮೇ 6ರಂದು ಸನ್ಯಾಸತ್ವ ದೀಕ್ಷೆ ಪಡೆಯಲಿದ್ದಾರೆ. ಮೇ 15ಕ್ಕೆ ಪಟ್ಟಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಈ ಸಂಬಂಧ ಮಾತನಾಡಿರುವ ಪುಟ್ಟಸ್ವಾಮಿ ಅವರು, ಇದು ದಿಢೀರ್ ಎಂದು ತೆಗೆದುಕೊಂಡ ನಿರ್ಧಾರವಲ್ಲ. ಜೀವಮಾನದಲ್ಲಿ ಗಾಣಿಗ ಸಮುದಾಯಕ್ಕೆ ಏನಾದರೂ ಮಾಡಬೇಕು ಮತ್ತು ಶಾಶ್ಚತವಾದ ಸಂಸ್ಥೆಯೊಂದನ್ನು ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆಯಿತ್ತು. 1972ರಲ್ಲಿ ಗಾಣಿಗ ಸಮುದಾಯದ ಒಳಪಂಗಡಗಳನ್ನು ಸೇರಿಸಿ ಸಂಘ ಸ್ಥಾಪಿಸಿ ಅದಕ್ಕೆ ಅಧ್ಯಕ್ಷನಾಗಿದ್ದೆ. ಎಲ್ಲರಲ್ಲಿಯೂ ಸಾಮರಸ್ಯ ಮೂಡಿಸಿದ್ದೆ. ಈಗ ಪೀಠಾಧಿಪತಿಯಾಗುತ್ತಿದ್ದೇನೆ. ಇನ್ನಷ್ಟು ಅಭಿವೃದ್ಧಿ ಮಾಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!