Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರೆಸ್ಟ್ ವಾರೆಂಟ್ ಇದ್ದರು ಉಕ್ರೇನ್ ಗೆ ನುಗ್ಗಿದರಾ ರಷ್ಯಾ ಅಧ್ಯಕ್ಷ..? : ರಷ್ಯಾ ಮಾಧ್ಯಮಗಳ ವರದಿ ನಂಬೋದಾ..? ಉಕ್ರೇನು ಮಾತ್ರ ಏನು ಹೇಳ್ತಿಲ್ಲ..!

Facebook
Twitter
Telegram
WhatsApp

 

ಉಕ್ರೇನ್ ದೇಶದ ಮೇಲೆ ರಷ್ಯಾ ಅಧ್ಯಕ್ಷ ಯುದ್ಧ ಸಾರಿ ವರ್ಷಗಳ ಮೇಲಾಗಿದೆ. ಸಾಕಷ್ಟು ಸಾವು ನೋವು ಸಂಭವಿಸಿದೆ. ಈ ಹಿನ್ನೆಲೆ ಅಂತರಾಷ್ಟ್ರೀಯ ಅಪರಾಧ ನ್ಯಾಯಾಲಯ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಈ ಬೆನ್ನಲ್ಲೇ ರಾಜಾರೋಷವಾಗಿ ವ್ಲಾಡಿಮರ್ ಪುಟಿನ್ ಉಕ್ರೇನ್ ನೆಲಕ್ಕೆ ಭೇಟಿ ನೀಡಿದ್ದಾರೆಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

ಉಕ್ರೇನ್ ಗೆ ಬೆಂಬಲವಾಗಿ ನಿಂತಿರುವ ಅಮೆರಿಕಾ, ನ್ಯಾಟೋ ಪಡೆಗಳಿಗೆ ರಷ್ಯಾ ಅಧ್ಯಕ್ಷ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಉಕ್ರೇನ್ ಆಕ್ರಮಿತ ಪ್ರದೇಶಗಳಿಗೆ ಪುಟಿನ್ ಭೇಟಿ ನೀಡಿ, ಎಚ್ಚರಿಜೆ ನೀಡುವ ಕೆಲಸ ಮಾಡಿದ್ದಾರೆ ಎನ್ನುತ್ತಿವೆ ರಷ್ಯಾ ಮಾಧ್ಯಮಗಳು. ಉಕ್ರೇನ್ ಯುದ್ಧದಲ್ಲಿ ರಷ್ಯಾ ತನ್ನ ವಶಕ್ಕೆ ತೆಗೆದುಕೊಂಡಿರುವ ಬಂದರು ನಗರಿ ಮರಿಯುಪೋಲ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಭೇಟಿ ನೀಡಿದ್ದಾರೆ. ಮರಿಯುಪೋಲ್ ಬಂದರು ನಗರದಿಂದ ಕೂಗಳತೆ ದೂರದಲ್ಲಿರುವ ಕ್ರಿಮಿಯಾಗೂ ಭೇಟಿ ನೀಡಿದ್ದರು ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿವೆ.

ಹೆಲಿಕಾಪ್ಟರ್ ಮೂಲಕ ಮರಿಯಪೋಲ್ ಗೆ ಬಂದಿಳಿದು, ಅಲ್ಲುನ ಸ್ಥಳೀಯರನ್ನು ಪುಟೀನ್ ಭೇಟಿ ಮಾಡಿ, ಮಾತನಾಡಿಸಿದ್ದಾರೆ ಎನ್ನಲಾಗ್ತಾ ಇದೆ. ಆದ್ರೆ ಉಕ್ರೇನ್ ಅಧ್ಯಕ್ಷರಾಗಲಿ ಈ ಬಗ್ಗೆ ಒಂದೇ ಒಂದು ಮಾತು ಆಡಿಲ್ಲ. ಇನ್ನು ಉಕ್ರೇನ್ ಮಾಧ್ಯಮಗಳು ಸಹ ಈ ಬಗ್ಗೆ ಸುದ್ದಿ ಮಾಡಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!