Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೆಂಬರ್ 24 ರಂದು ಸಿ.ಎನ್.ಸಿ ಪಿಯು ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಮತ್ತು ನೀಲ ನಕ್ಷೆ ತಯಾರಿಸುವ ಕಾರ್ಯಾಗಾರ : ಪ್ರಾಂಶುಪಾಲರಾದ ನಾಗರಾಜು ಮಾಹಿತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ ನ. 23 : ಇತಿಹಾಸ ವೇದಿಕೆ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಇದರ ಸಂಯುಕ್ತಾಶ್ರಯದಲ್ಲಿ ಪ್ರಶ್ನೆ ಪತ್ರಿಕೆ ಮತ್ತು ನೀಲ ನಕ್ಷೆ ತಯಾರಿಸುವ ಕಾರ್ಯಾಗಾರವೂ ನವೆಂಬರ್  24 ರ ಶುಕ್ರವಾರ ನಗರದ ಸಿ.ಎನ್.ಸಿ.(ಚಿನ್ಮೂಲಾದ್ರಿ) ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಎನ್.ಸಿ.(ಚಿನ್ಮೂಲಾದ್ರಿ) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ತಿಳಿಸಿದ್ದಾರೆ.

ಕಾರ್ಯಗಾರವನ್ನು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕರಾದ ಪುಟ್ಟಸ್ವಾಮಿ ಆರ್ ಉದ್ಘಾಟಿಸಲಿದ್ದಾರೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ರಂಗಪ್ಪ ಎಲ್, ಕಾರ್ಯದರ್ಶಿ ನಾಗರಾಜ್ ಕೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ ಬಿ.ಆರ್. ಇತಿಹಾಸ ವೇದಿಕೆಯ ಗೌರವಾಧ್ಯಕ್ಷರಾದ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಆರ್. ಮುಸ್ತಪ, ಕಾರ್ಯಾದ್ಯಕ್ಷರಾದ ಎಂ.ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವೇದಿಕೆಯ ಅಧ್ಯಕ್ಷರಾದ ಜಿ.ಎಸ್.ತಿಪ್ಪೇಸ್ವಾಮಿ ವಹಿಸಲಿದ್ದಾರೆ.
ತುಮಕೂರಿನ ಶಿರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ತಿಮ್ಮರಾಜು ಪ್ರಶ್ನೆ ಪತ್ರಿಕೆ ಮತ್ತು ನೀಲನಕ್ಷೆ ತಯಾರಿಕೆಯ ಬಗ್ಗೆ ತಿಳಿಸಿ ಕೊಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!