Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಆರ್ ಅಶೋಕ್ ದೂರು : ಕಾರಣ ಏನು ಗೊತ್ತಾ..?

---Advertisement---

 

ಬೆಂಗಳೂರು: ಇತ್ತೀಚಗೆ ಅಧಿಕಾರಗಳ ಜೊತೆಗಿನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ್ ಇರುವ ಫೋಟೋವೊಂದು ವೈರಲ್ ಆಗಿತ್ತು. ಈ ಫೋಟೋ ವಿರೋಧ ಪಕ್ಷಗಳಿಗೆ ಚರ್ಚೆಯ ವಿಚಾರ ಕೂಡ ಆಗಿತ್ತು. ಸಾಕಷ್ಟು ಟ್ವೀಟ್ ಕೂಡ ಮಾಡಿದ್ದರು. ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದರು. ಆದರೆ ಇದೇ ವಿಚಾರಕ್ಕೆ ಇದೀಗ ಬಿಜೆಪಿ ನಾಯಕ ಆರ್ ಅಶೋಕ್ ದೂರು ನೀಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೆವಾಲ ಅವರು ಇದ್ದ ಹಿನ್ನೆಲೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಾತನಾಡಿದ ಆರ್ ಅಶೋಕ್, ಬೆಂಗಳೂರಿಗೆ ಅನೇಕ ಸಂಸದರು ಇದ್ದಾರೆ. ಆದರೆ ಇವರ್ಯಾರನ್ನು ಸಭೆಗೆ ಕರೆಯದೆ ಸುರ್ಜೆವಾಲ ಅವರನ್ನು ಮಾತ್ರ ಸಭೆಗೆ ಕರೆಯಲಾಗಿದೆ. ಕಾಂಗ್ರೆಸ್ ಸರ್ಕಾರ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಹೊರಟಿದೆ ಎನಿಸುತ್ತದೆ.

ನಮ್ಮ ರಾಜ್ಯವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಹೊರಟಿದೆ. ಅಧಿಕಾರದ ಮದದಿಂದ ಈ ರೀತಿ ನಡೆದುಕೊಳ್ಳುತ್ತಿದೆ. ಸಭೆಯಲ್ಲಿ ಸುರ್ಜೆವಾಲ್ ಕುಳಿತಿದ್ದಾರೆ ಓಕೆ. ಆದರೆ ಮೇನ್ ಚೇರ್ ನಲ್ಲಿ ಕೂರಿಸಿ ತಪ್ಪು ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು. ಅದಕ್ಕೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment