Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ವಿರುದ್ದ ಆರ್ ಅಶೋಕ್ ತಿರುಗೇಟು

Facebook
Twitter
Telegram
WhatsApp

ಬೆಂಗಳೂರು: ಸಣ್ಣಪುಟ್ಟ ಜನ ಇದಕ್ಕೆ ಮಾತಾಡಿದರೆ ಯಾರೂ ತಲೆ ಕೆಡಿಸಿಕೊಂಡಿಲ್ಲ. ಆದರೂ, ಸಿದ್ದರಾಮಯ್ಯ ವಿರೋಧ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಆರ್ ಅಶೋಕ್ ಹೇಳಿದರು. ಇಂದು ಮಾಧ್ಯ,ಮಗಳ ಜೊತೆಗೆ ಮಾತನಾಡಿದ ಅವರು, ಹೀಗೆಯೇ ಮಾತನಾಡುತ್ತಿರಲಿ, ಲಸಿಕಾ ಅಭಿಯಾನಕ್ಕೆ ಇನ್ನೂ ಕಳೆ ಬರುತ್ತದೆ. ಪ್ರಧಾನಿ ಮೋದಿಯನ್ನು ಟೀಕೆ ಮಾಡದೇ ಹೋದರೆ ಕಾಂಗ್ರೆಸ್ ಪಕ್ಷದವರಿಗೆ ತಿಂದಿದ್ದು ಜೀರ್ಣ ಆಗೋದಿಲ್ಲ. ಕುಡಿಯುವ ನೀರು ಕೂಡ ಒಳಗೆ ಹೋಗಲ್ಲ ಎಂದು ಕಿಡಿಕಾರಿದರು.

ಟೀಕೆ ಮಾಡುವುದು ಕಾಂಗ್ರೆಸ್ ಪಕ್ಷದವರ ಹುಟ್ಟು ಗುಣ. ಕಾಂಗ್ರೆಸ್ ಹೈಕಮಾಂಡ್ ಕೂಡ ಮೋದಿಯನ್ನ ಹಳಿಯಲು ಹೇಳಿದೆ. ಯಾವುದಕ್ಕೆ ಟೀಕೆ ಮಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಕೂಡ ಸಿದ್ದರಾಮಯ್ಯಗೆ ಇಲ್ಲ. ಒಂದು ಒಳ್ಳೆಯ ಕೆಲಸ ಮಾಡಿದಾಗ ಒಳ್ಳೆಯದನ್ನು ಹೇಳಬೇಕು. ಆದ್ದರಿಂದ, ಇಂತಹ ನಾಯಕನ ಬಗ್ಗೆ ನಮಗೆ ಬೇಸರ ಆಗುತ್ತಿದೆ ಎಂದು ಕೆಂಡಕಾರಿದರು.

ಇನ್ನೂ ಉತ್ತರಾಕಾಂಡ ರಾಜ್ಯದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದೆ. ನಮ್ಮವರಿಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ. ರಾಜ್ಯದ ಅಧಿಕಾರಿಗಳ ತಂಡ ಅಲ್ಲಿಗೆ ತೆರಳಿದೆ. ಕನ್ನಡಿಗರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ತವರಿಗೆ ವಾಪಸ್ ಕರೆ ತರುವ ಕೆಲಸ ಆಗುತ್ತದೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!