Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಣ್ಣರ ಸೆಪ್ಟೆಂಬರ್ ಕ್ರಾಂತಿಗೆ ಆರ್ ಅಶೋಕ್ ಕೊಟ್ರು ಕ್ಲಾರಿಟಿ..!

---Advertisement---

ಬೆಂಗಳೂರು: ಕಳೆದ ಎರಡು ದಿನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಆಗಸ್ಟ್ – ಸೆಪ್ಟೆಂಬರ್ ಕ್ರಾಂತಿಯದ್ದೇ ಚರ್ಚೆ. ಸಚಿವ ರಾಜಣ್ಣ ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಮಾತಾಡಿದಾಗಿನಿಂದ ಜೋರು ಚರ್ಚೆ ನಡೆಯುತ್ತಿದೆ. ಇದೀಗ ಆ ಸೆಪ್ಟೆಂಬರ್ ಕ್ರಾಂತಿಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಇದೇ ವರ್ಷ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಮಾತು ಇದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಆಗಲಿದ್ದಾರೆ ಅಂತ ರಾಜಕೀಯ ನಾಯಕರೇ ಭವಿಷ್ಯ ನುಡಿಯುತ್ತಿದ್ದಾರೆ ಎಂದು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ತಿರುಗೇಟು ನೀಡಿದ್ದಾರೆ.

ಇದೆ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಆರ್ ಅಶೋಕ್, ಆರ್ ಎಸ್ ಎಸ್ ನಂತಹ ಒಂದು ಅಪ್ಪಟ ರಾಷ್ಟ್ರೀಯವಾದಿ, ನಿಸ್ವಾರ್ಥ ಸಂಘಟನೆ ಬಗ್ಗೆ ಮಾತನಾಡುವ ನೈತಿಕತೆಯಾಗಲಿ, ವಿಶ್ವಾಸಾರ್ಹತೆಯಾಗಲಿ ನಿಮಗರ ಇಲ್ಲ. ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಬಂಧೀಖಾನರ ಮಾಡಿದ ಕಾಂಗ್ರೆಸ್ ಪಕ್ಷದಿಂದ ಆರ್ ಎಸ್ ಎಸ್ ಅಥವಾ ಬಿಜೆಪಿ ಸಂವಿಧಾನದ ಪಾಠ ಕಲಿಯಬೇಕಾಗಿಲ್ಲ.

ಆರ್ ಎಸ್ ಎಸ್ ಅನ್ನು ಬೈದರೆ, ನಿಂದಿಸಿದರೆ ಹಾಗೂ ಟೀಕೆ ಮಾಡಿದರೆ ನಿಮ್ಮ ಕಾಂಗ್ರೆಸ್ ಹೈಕಮಾಂಡ್ ಅನ್ನು ಮೆಚ್ಚಿಸಿ,‌ಇನ್ನೊಂದಷ್ಟು ದಿನ ಕುರ್ಚಿಗೆ ಅಂಟಿಕೊಂಡಿರಬಹುದು ಎನ್ನುವ ಭ್ರಮೆಯಿಂದ ಈ ಕೂಡಲೇ ಹೊರಗೆ ಬನ್ನಿ. ಆಗಸ್ಟ್ – ಸೆಪ್ಟೆಂಬರ್ ಕ್ರಾಂತಿಯ ಬಗ್ಗರ ಈಗಾಗಲೇ ನಿಮ್ಮ ಪಕ್ಷದ ಶಾಸಕರೇ ಮಾತನಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...