Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭ್ರೂಣ ಹತ್ಯೆ ಪ್ರಕರಣ ಎಸ್ಐಟಿಗೆ ನೀಡಲು ಆರ್ ಅಶೋಕ್ ಒತ್ತಾಯ..!

---Advertisement---

 

 

ಬೆಳಗಾವಿ: ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಲೂ ಸಾಕಷ್ಟು ಭ್ರೂಣ ಹತ್ಯೆ ಕೇಸ್ ಗಳು ಸಹ ಬೆಳಕಿಗೆ ಬಂದಿದೆ. ಭ್ರೂಣ ಹತ್ಯೆ ಕೇಸ್ ಇಂದು ಸದನದಲ್ಲೂ ಬಾರೀ ಚರ್ಚೆಗೆ ಬಂದಿದೆ. ವಿಪಕ್ಷ ನಾಯಕ ಆರ್ ಅಶೋಕ್ ಈ ವಿಚಾರವಾಗಿ ಮಾತನಾಡಿದ್ದಾರೆ. ಎಸ್ಐಟಿ ತನಿಖೆಗೆ ನೀಡಲು ಆಗ್ರಹಿಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ದಾಖಲಾಗಿರುವುದು ಕೇವಲ 87 ಪ್ರಕರಣ. ಇದೊಂದು ರೀತಿಯಲ್ಲಿ ಕೊಲೆಯೇ ಸರಿ. ಹೀಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಎಸ್ಐಟಿ ತನಿಖೆಗೆ ನೀಡಬೇಕು. ಗಂಡು ಮಗು ಬೇಕು ಎಂಬ ಆಸೆಯಿಂದ ಭ್ರೂಣ ಹತ್ಯೆ ಮಾಡಿಸಲಾಗುತ್ತಿದೆ. ವರದಕ್ಷಿಣೆ ಕೂಡ ಇದಕ್ಕೆ ಕಾರಣವಾಗಿದೆ. ಭ್ರೂಣ ಹತ್ಯೆ ವಿಚಾರ ಬಗ್ಗೆ ಇಷ್ಟೆಲ್ಲಾ ಚರ್ಚೆಯಾದರೂ ಹೊಸಕೋಟೆಯಲ್ಲಿ 16 ವಾರಗಳ ಭ್ರೂಣ ಹತ್ಯೆ ಮಾಡಲಾಗಿದೆ.

ಕಾನೂನಿಗೆ ಎಷ್ಟು ಗೌರವ ಕೊಡುತ್ತಾರೆ, ಎಷ್ಟು ಬಲಾಢ್ಯರಿದ್ದಾರೆ ಎಂದು ಅರ್ಥವಾಗುತ್ತದೆ. ಎಲ್ಲ ರಂಗದಲ್ಲೂ ಹೆಣ್ಣು ಗುರುತಿಸಿಕೊಂಡಿರುವ ಈ ಕಾಲದಲ್ಲಿ ಭ್ರೂಣ ಹತ್ಯೆ ತಲೆ ತಗ್ಗಿಸುವ ಘಟನೆ. ಎರಡ್ಮೂರು ಜಿಲ್ಲೆಯಲ್ಲಿ ಇದು ಕಂಡಿದೆ. ನನ್ನ ಪ್ರಕಾರ ಇಡೀ ರಾಜ್ಯದಲ್ಲಿ ಇದೆ. ಗರ್ಭಿಣಿ ತಾಯಿಗೆ ತೀರ್ಮಾನದ ಅಧಿಕಾರ ಇರಲ್ಲ, ಬದಲಾಗಿ ಕುಟುಂಬ ಮಾಡುತ್ತಿದೆ. ‌ಮನೆ ಹಾಳು ಕೆಲಸ ಮಾಡುವ ಆಸ್ಪತ್ರೆಗೆ ನಮ್ಮ ‘ಮನೆ ಕ್ಲಿನಿಕ್’ ಎಂದು‌ ಹೆಸರು ಇಡಲಾಗಿದೆ. ಇವರೆಲ್ಲರದ್ದು ಒಂದು ದೊಡ್ಡ ಗ್ಯಾಂಗ್‌ ಇದೆ. ಮನೆಯ ಸದಸ್ಯರ ಕಿರಕುಳ ಕೂಡ ಭ್ರೂಣ ಹತ್ಯೆಗೆ ಕಾರಣವಾಗುತ್ತಿದೆ. ಇಂತಹ ಘಟನೆಗಳನ್ನು ಹುಡುಕುವ ಏಜೆಂಟರು ಇದ್ದಾರೆ. ಈ ಕೃತ್ಯದಲ್ಲಿ ವೈದ್ಯರೂ ಸೇರಿರುವುದು ಖೇದಕರ, ಅವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment