Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಕಮಲದ ಸುಳಿವು ಬಿಟ್ಟು ಕೊಟ್ರಾ ಆರ್ ಅಶೋಕ್..?

---Advertisement---

 

ಬೆಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಕಳೆದ ಬಾರಿಯ ಫಲಿತಾಂಶ ಅತಂತ್ರವಾಗಿತ್ತು. ಹಾಗೋ ಹೀಗೋ ಮಾಡಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದರು. ಅದು ಆರೇ ತಿಂಗಳು. ಹದಿನೇಳು ಶಾಸಕರು ಸರ್ಕಾರದಿಂದ ಕಾಲ್ಕಿತ್ತು ಬಿಜೆಪಿ ಸೇರಿದ್ದರು. ಅದು ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಈ ಬಾರಿಯೂ ಸ್ಪಷ್ಟ ಬಹುಮತ ಬರುವುದು ಅನುಮಾನ ಎನ್ನಲಾಗಿದೆ. ಬಂದರೂ ಅದು ಕಾಂಗ್ರೆಸ್ ಪರವಾದ ಅಲೆ ಎದ್ದಿದೆ.

ಈ ಮಧ್ಯೆ ಆರ್ ಅಶೋಕ್ ಒಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಲ್ಲಿ ಸಮೀಕ್ಷೆಗಳು ನೀಡಿರುವ ಹೇಳಿಕೆ ನಿಜವಾಗುತ್ತೆ ಎಂದು ಹೇಳುವ ಹಾಗಿಲ್ಲ. ಕೆಲವೊಂದು ಕಡೆ ಸತ್ಯವಾಗಿದೆ ಅಷ್ಟೆ. ಆದರೆ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಬಾರಿ ಬಿಜೆಪಿಗೆ ಬಹುಮತ ಬರುತ್ತೆ ಅನ್ನೋದು. ಜನರಿಗೆ ಗೊತ್ತಾಗಿದೆ ಏನಾದರೂ ಆಗಲಿ ಡಬಲ್ ಇಂಜಿನ್ ಸರ್ಕಾರ ಬರಲಿ ಎಂಬುದೇ ಆಗಿದೆ. ಹೀಗಾಗಿ ಜನರು ನಿರ್ಧಾರ ಮಾಡಿದ್ದಾರೆ.

ಒಂದು ವೇಳೆ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ಸರ್ಕಾರ ರಚನೆ ಮಾಡುವುದು ನಾವೇ. ಯಾಕಂದ್ರೆ ಕಾಂಗ್ರೆಸ್ ಗೂ ಬಹುಮತ ಸಿಗಲ್ಲ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಹೀಗಾಗಿ ಸರ್ಕಾರ ರಚನೆಗೂ ಹೈಕಮಾಂಡ್ ನ ಸಹಾಯ ಬೇಕಾಗುತ್ತೆ ಎಂದಿದ್ದಾರೆ.

ನಾವೇ ಸರ್ಕಾರ ರಚನೆ ಮಾಡುವುದು, ಹೈಕಮಾಂಡ್ ಈ ಎಲ್ಲಾ ಪದಗಳು ಮತ್ತೆ ಬಿಜೆಪಿ ಏನಾದರೂ ಆಪರೇಷನ್ ಕಮಲಕ್ಕೆ ಕೈ ಹಾಕಿದೆಯಾ ಎಂಬ ಅನುಮಾನ ಹುಟ್ಟು ಹಾಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...