Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಮೇಲೆ ಆರ್ ಅಶೋಕ ವಾಗ್ದಾಳಿ

Facebook
Twitter
Telegram
WhatsApp

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. 120 ವರ್ಷದ ಪಕ್ಷ 20 ಸೀಟ್ ಗೆಲ್ಲೋಕೆ ಆಗಲಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಹೋಗಿ ಪ್ರಾದೇಶಿಕ ಪಕ್ಷ ಆಗಿದೆ. ಈಗ ಕಾಂಗ್ರೆಸ್ ಪಕ್ಷವೇ ಅಡಾಕ್ ಪಾರ್ಟಿ. ಒಡೆದ ಮನೆ. ಅವರಲ್ಲೇ ಕಚ್ಚಾಟ ಪ್ರಾರಂಭವಾಗಿದೆ.

ಕಾಂಗ್ರೆಸ್ ನವರು ತಮ್ಮ ಮನೆ ಶುದ್ಧ ವಾಗಿಲ್ಲದಿದ್ದರೂ, ಬೇರೆ ಮನೆಯ ಶುದ್ಧತೆಯ ಬಗ್ಗೆ ಮಾತನಾಡುತ್ತಾರೆ, ಎಂದು ಕಂದಾಯ ಸಚಿವ ಆರ್ ಅಶೋಕ ಕಾಂಗ್ರೆಸ್ ಪಕ್ಷದ ಮೇಲೆ ವಾಗ್ದಾಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಗ್ರಪ್ಪ ಮತ್ತು ಸಲೀಂ ಮಾತುಕತೆ ವಿಚಾರಾವಾಗಿ ಮಾತನಾಡಿ, ಡಿಕೆಶಿಯನ್ನ ಸೈಡ್ ಲೈನ್ ಮಾಡುವದಕ್ಕೆ ಕಾಂಗ್ರೆಸ್ ಮುಂದಾಗಿದೆ. ಕುತಂತ್ರ ರಾಜಕೀಯಕ್ಕೆ ಕಾಂಗ್ರೆಸ್ ಹೆಸರು ವಾಸಿ. ಅವರ ಪಕ್ಷದವರಿಗೆ ಅವರೇ ಶತ್ರುಗಳು. ಇನ್ನೆಂದೂ ಕಾಂಗ್ರೆಸ್ ಗೆ ಈ ದೇಶದಲ್ಲಿ ಭವಿಷ್ಯವಿಲ್ಲ, ಎಂದರು.

ಮೋದಿ ಹೆಬ್ಬೆಟ್ ಗಿರಾಕಿ ಎಂದ ಕಾಂಗ್ರೆಸ್ ಮೇಲೆ ಹರಿಹಾಯ್ದ ಸಚಿವರು, “ಬುದ್ದಿ ಇದ್ದವರು ಈ ರೀತಿ ಮಾತನಾಡುವದಿಲ್ಲ. ಮೋದಿ ಪ್ರಪಂಚಕ್ಕೇ ಮಾರ್ಗದರ್ಶನ ಮಾಡುವ ನಾಯಕ. ಅದೆಷ್ಟೋ ಜನಸ್ನೇಹಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಪ್ರಪಂಚವೇ ಮೋದಿಯವರನ್ನು ಗೌರವಿಸುತ್ತಿದೆ. ಎಲ್ಲ ದೇಶದವರು ಮೋದಿಯವರನ್ನು ತಮ್ಮ ದೇಶಕ್ಕೆ ಗೌರವದಿಂದ ಆಹ್ವಾನಿಸುತ್ತಿದ್ದಾರೆ. ಮನಹೋನ್ ಸಿಂಗ್ ಪ್ರಧಾನಿ ಇದ್ದಾಗ ಬೇರೆ ದೇಶದವರು ಯಾರಾದ್ರು ಕರೆಯುತ್ತಿದ್ದರಾ? ಲೋಕಸಭೆಯಲ್ಲಿ ಮೋದಿ ವಿರುದ್ದ ಅಭ್ಯರ್ಥಿಯೆ, ಇಲ್ಲ ಎಂದು ಲೇವಡಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!