ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 16 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಮಂಜುನಾಥ್ರವರಿಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ದಾರುಕಾ ಬಡಾವಣೆಯಲ್ಲಿ ಶನಿವಾರ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ದಾರುಕಾ ಬಡಾವಣೆಯ ನಿವಾಸಿಗಳು, ನೂರಾರು ಅಭಿಮಾನಿಗಳು ಹಾಗೂ ಬಂಧು ಬಳಗದವರು ಆರ್.ಮಂಜುನಾಥ್ಗೆ ಬೃಹದಾಕಾರವಾದ ಹಾರ ಹಾಕಿ ಅಭಿನಂದಿಸಿದರು.
ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಇರುವ ಹೇಮಾ ಹೇಮಿಗಳ ನಡುವೆ ಆರ್.ಮಂಜುನಾಥ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಮ್ಮಿ ಸಾಧನೆಯಲ್ಲ. ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅವರು ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಕಂಡವರು ಎಂದು ನೆರೆದಿದ್ದ ಅಭಿಮಾನಿಗಳು ಹರಸಿ ಹಾರೈಸಿದರು.
ಇದೇ ಸಂದರ್ಭದಲ್ಲಿ ಆರ್.ಮಂಜುನಾಥ್ರವರು ಕೇಕ್ ಕತ್ತರಿಸುವ ಮೂಲಕ ತಮ್ಮ 62 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲ್ಲೇಶಪ್ಪ, ನಗರಸಭೆ ಮಾಜಿ ಸದಸ್ಯ ಮಹೇಶ್, ಇ.ಶಿವಕುಮಾರ್, ಎಸ್.ಡಿ.ರಾಮಸ್ವಾಮಿ, ಪ್ರೊ.ಚಂದ್ರಶೇಖರ್ ವೇದಿಕೆಯಲ್ಲಿದ್ದರು. ಆರ್.ಮಂಜುನಾಥ್ರವರ ಕುಟುಂಬದವರು ಹಾಜರಿದ್ದು, ಆರ್.ಮಂಜುನಾಥ್ರವರಿಗೆ ಹುಟ್ಟುಹಬ್ಬದ ಶುಭ ಕೋರಿದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







