Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪುಟಕ್ಕೆ ರಾಘವೇಂದ್ರ ಸೇರ್ಪಡೆ : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು..?

Facebook
Twitter
Telegram
WhatsApp

ಮೈಸೂರು: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ಸಚಿವ ಸಂಪುಟ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು ಅಲ್ವಾ. ಮುಖ್ಯಮಂತ್ರಿಗಳು ಈಗಾಗಲೇ ಎರಡು ಸಲ ಭೇಟಿ ಮಾಡಿದ್ದಾರೆ. ಇನ್ನೊಂದು ಎರಡು ಮೂರು ದಿನದಲ್ಲಿ ತೀರ್ಮಾನವಾಗಲಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಎರಡು ಮೂರು ದಿನದಲ್ಲಿ ಸಂಪುಟದ ವಿಸ್ತರಣೆ ತೀರ್ಮಾನವಾಗುತ್ತೆ ಎಂಬುದನ್ನು ಅವರೇ ಹೇಳಿದ್ದಾರೆ. ಇನ್ನು ಇದೆ ವೇಳೆ ಬಿ ವೈ ರಾಘವೇಂದ್ರ ಅವರು ಸಂಪುಟ ಸೇರುತ್ತಾರಾ ಎಂಬುದಕ್ಕೆ ಗೊತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರ ಅತ್ಯಂತ ದುರ್ಬಲ, ಭ್ರಷ್ಟ ಸರ್ಕಾರವಿದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಯಾರು ದುರ್ಬಲರಿದ್ದರು, ಯಾರು ಭ್ರಷ್ಟರಿದ್ದರು ಅವರ ಬಾಯಿಯಿಂದ ಇಂಥ ಮಾತೇ ಬರುವುದು. ಸಿದ್ದರಾಮಯ್ಯ ಅವರ ಕಥೆ ಏನು ಅಂಥ ಇಡೀ ಜಗತ್ತಿಗೆ ಗೊತ್ತಿದೆ. ಯಾವ ಕಾಲದಲ್ಲಿ ಅವರು ಏನೇನು ಮಾಡಿದ್ರು ಎಂಬುದು. ಅನಾವಶ್ಯಕವಾಗಿ, ಪ್ರಚಾರಕ್ಕಾಗಿ ಇಂಥ ಹೇಳಿಕೆ ಕೊಡುವುದನ್ನು ಇನ್ನಾದರೂ ನಿಲ್ಲಿಸಿ, ಗೌರವದಿಂದ ನಡೆದುಕೊಳ್ಳಬೇಕೆಂದು ಹೇಳುತ್ತೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!