Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅಭಿಮಾನಿಯಾಗಿದ್ದ ರಘುಗೆ ಕೊನೆಯದಾಗಿಯೂ ತಾಯಿ ಮುಖ ನೋಡಲಾಗಲಿಲ್ಲ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ರಘು ನತದೃಷ್ಟ ಅಂತಾನೇ ಹೇಳಬಹುದು. ಆತನ ಇಡೀ ಜೀವಮಾನದಲ್ಲಿ ಇಂದಿನ ಘಟನೆಯನ್ನು ಆತ ಮರೆಯುವುದಕ್ಕೆ ಸಾಧ್ಯವೇ ಇಲ್ಲವೇನೊ. ರಘು ತಾಯಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ತಾಯಿಯನ್ನು ಕೊನೆಯದಾಗಿಯೂ ನೋಡುವುದಕ್ಕೆ ಆಗಿಲ್ಲ.

ರಘು ಜೈಲು ಸೇರಿದಾಗಿನಿಂದ ಅವರ ತಾಯಿ ಮಂಜುಳ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಗನ ಸ್ಥಿತಿ ಹೀಗಾಯ್ತಲ್ಲ ಅಂತ ಕೊರಗಿ ಕೊರಗಿ ಹಾಸಿಗೆ ಹಿಡಿದಿದ್ದರು. ಆದರೆ ಇಂದು ಇಹಲೋಕ ತ್ಯಜಿಸಿದರು. ಅಂತ್ಯ ಸಂಸ್ಕಾರಕ್ಕೆ ರಘುನನ್ನು ಕಳುಹಿಸಿಕೊಡಿ ಎಂದು ಮನವಿ ಕೂಡ ಮಾಡಿದ್ದರು. ಬರಬಹುದು ಎಂದು ಸಂಜೆ ತನಕ ಕಾದರು. ಆದರೆ ಮಗ ಬರದೇ ಇದ್ದ ಕಾರಣ, ಮೃತದೇಹವನ್ನು ಹೆಚ್ಚು ಸಮಯ ಇಡಲು ಆಗದ ಕಾರಣ, ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ.

ಚಿತ್ರದುರ್ಗದ ಕೋಳಿ ಬುರಜನಹಟ್ಟಿಯಲ್ಲಿ ಮಂಜುಳಾ ನಿಧನರಾಗಿದ್ದರು. ಅಂತ್ಯ ಸಂಸ್ಕಾರ ಕೂಡ ಮುಗಿಸಿದ್ದಾರೆ. ತಾಯಿ‌ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಘು ದುಃಖಿತನಾಗಿದ್ದಾನೆ. ತಾಯಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ಕೇಳಿದ್ದರು. ರಘು ಅರ್ಜಿಗೆ ಕೋರ್ಟ್ ಕೂಡ ಸಮ್ಮತಿ ನೀಡಿತ್ತು. ಆದರೆ ರಘು ಊರಿಗೆ ಬರುವಷ್ಟರಲ್ಲಿ ಅಂತ್ಯ ಸಂಸ್ಕಾರ ನಡೆದು ಹೋಗಿದೆ. ದರ್ಶನ್ ಅಭಿಮಾನ ಸಂಘದ ಅಧ್ಯಕ್ಷನಾಗಿದ್ದ ರಘು, ರೇಣುಕಾಸ್ವಾಮಿಯ ಕೊಲೆ ಕೇಸಲ್ಲಿ ಭಾಗಿಯಾಗಿ, ಇಂದು ತಾಯಿಯ ಮುಖವನ್ನು ಕೊನೆಯದಾಗಿಯೂ ನೋಡಲಾಗದಂತ ಸ್ಥಿತಿಗೆ ತಲುಪಿದ್ದಾರೆ. ರಘು ಬರುವುದಿಲ್ಲವೇನೋ ಎಂದುಕೊಂಡು ಕುಟುಂಬಸ್ಥರು ಅದಾಗಲೇ ಮಂಜುಳಾ ಅವರ ಅಂತ್ಯ ಸಂಸ್ಕಾರವನ್ನು ಮುಗಿಸಿದ್ದರು. ಹೀಗಾಗಿ ರಘುಗೆ ಕೊನೆಯದಾಗಿಯೂ ಅವರ ತಾಯಿ ಮುಖವನ್ನು ನೋಡುವುದಕ್ಕೆ ಆಗಲಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!