Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ಕೋಟಿ ಹಣ ವಾಪಾಸ್ ಮಾಡಿದ ರಾಹುಲ್ ದ್ರಾವಿಡ್ : ಸಮಾನತೆಯ ಭಾವವೇ ಇದಕ್ಕೆ ಕಾರಣ..!

Facebook
Twitter
Telegram
WhatsApp

ಈಗಷ್ಟೇ ಟೀಂ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಭಾರತ ವಿಶ್ವಕಪ್ ಗೆದ್ದ ಖುಷಿಯಲ್ಲಿ ಬಿಸಿಸಿಐ ಕಡೆಯಿಂದ 125 ಕೋಟಿ ಬಹುಮಾನವನ್ನು ಘೋಷಣೆ ಮಾಡಲಾಗಿತ್ತು. ಇದನ್ನು ಆಟಗಾರರಿಗೆ, ಕೋಚ್ ಗಳಿಗೆ ಹಂಚಿಕೆ ಮಾಡಲಾಗಿದೆ. ಅದರಲ್ಲೂ ಟೀಂ ಇಂಡಿಯಾದ ಹೆಡ್ ಕೋಚ್ ಆಗಿದ್ದಂತ ರಾಹುಲ್ ದ್ರಾವಿಡ್ ಅವರಿಗೂ ಐದು ಕೋಟಿ ಬಹುಮಾನವನ್ನು ಘೋಷಣೆ ಮಾಡಲಾಗಿತ್ತು. ಆದರೆ ಆ ಐದು ಕೋಟಿ ಹಣವನ್ನು ರಾಹುಲ್ ದ್ರಾವಿಡ್ ನಿರಾಕರಿಸಿದ್ದಾರೆ.

ಟೀಂ ಇಂಡಿಯಾ ಜೊತೆಗೆ ನಿಂತ 42 ಆಟಗಾರರಿಗೆ ಈ 125 ಕೋಟಿ ಹಣದಲ್ಲಿ ಹಂಚಿಕೆ ಮಾಡಲಾಗಿದೆ. ಅದರಲ್ಲಿ 15 ಆಟಗಾರರಿಗೆ ತಲಾ ಐದು ಕೋಟಿ ಬಹುಮಾನ ನೀಡಲಾಗಿದೆ. ಅದರಲ್ಲಿ ರಾಹುಲ್ ದ್ರಾವಿಡ್ ಕೂಡ ಇದ್ದಾರೆ. ಇನ್ನುಳಿದಂತೆ ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಕೋಚ್ ಸೇರಿದಂತೆ ಇತರೆ ಕೋಚ್ ಗಳಿಗೆ ತಲಾ 2.5 ಕೋಟಿ ಬಹುಮಾನವನ್ನು ಘೋಷಣೆ ಮಾಡಿದೆ. ಆದರೆ ರಾಹುಲ್ ದ್ರಾವಿಡ್ ಈ ಐದು ಕೋಟಿ ಹಣವನ್ನು ತಿರಸ್ಕಾರ ಮಾಡಿದ್ದಾರೆ. ಅದಕ್ಕೂ ಕಾರಣವೊಂದಿದೆ. ಈ ಕಾರಣದಿಂದ ರಾಹುಲ್ ದ್ರಾವಿಡ್ ಮತ್ತೊಮ್ಮೆ ಎಲ್ಲರ‌ಮನಸ್ಸು ಗೆದ್ದಿದ್ದಾರೆ.

ಬೌಲಿಂಗ್, ಬ್ಯಾಟಿಂಗ್, ಕೋಚ್ ಗಳಿಗೆ ತಲಾ 2.5 ಕೋಟಿ ನೀಡುತ್ತಿರುವ ಕಾರಣ ನನಗೂ ಐದು ಕೋಟಿ ಹಣ ಬೇಡ. ಅವರಿಗೆಲ್ಲಾ ನೀಡಿದಂತೆ ಬರೀ ಬಹುಮಾನದ ಹಣವನ್ನಷ್ಟೇ ನೀಡಿ ಎಂದಿದ್ದಾರಂತೆ. ರಾಹುಲ್ ದ್ರಾವಿಡ್ ಅವರ ಮಾತಿಗೆ ಗೌರವ ನೀಡಿ, ಬಿಸಿಸಿಐ ಎರಡೂವರೆ ಕೋಟಿ ಕೊಡಲು ಒಪ್ಪಿದೆ. ಈ ಹಿಂದೆ U-19 ಪಂದ್ಯದ ವೇಳೆಯೂ ಇದೇ ರೀತಿ ನಿರ್ಧಾರ ಮಾಡಿದ್ದರು. ಎಲ್ಲರಿಗೂ 25 ಲಕ್ಷ ನೀಡಿ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ನೀಡುವುದಕ್ಕೆ ಬಂದಾಗ ಬಿಸಿಸಿಐ ಬಳಿ 25 ಲಕ್ಷವನ್ನಷ್ಟೇ ಪಡೆದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!